ಕರ್ನಾಟಕದಲ್ಲಿ 22ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ ; ದೇಶದಲ್ಲಿ ಮಹಾಮೈತ್ರಿ ನುಚ್ಚುನೂರಾಗಲಿದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

Featured, ಉಡುಪಿ

ಉಡುಪಿ : ಚುನಾವಣೋತ್ತರ ಸಮೀಕ್ಷೆ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಈ ಬಾರಿ ಲೋಕಸಮರದಲ್ಲಿ ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ನಿಜವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕುವುದಾಗಿ ಸಿಎಂ ಹೇಳಿಕೆ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಯಿಂದ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಯಾಗಿದೆ. 350ಕ್ಕೂ ಅಧಿಕ ಸ್ಥಾನ ಪಡೆಯುವ ನಮ್ಮ ನಿರೀಕ್ಷೆ ನಿಜವಾಗಿದೆ. ದೇಶದಲ್ಲಿ ಮಹಾಮೈತ್ರಿ ನುಚ್ಚುನೂರಾಗಲಿದೆ. ಕರ್ನಾಟಕದಲ್ಲಿ 22ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮಮತಾ ಬ್ಯಾನರ್ಜಿಗೆ ಈ ದೇಶದ ಮತದಾರರ ಮೇಲೆ ನಂಬಿಕೆಯೇ ಇಲ್ಲ. ಹಾಗಾಗಿ ಮತಯಂತ್ರದ ಮೇಲೂ ನಂಬಿಕೆ ಇಲ್ಲ. ಆದರೆ, ಅವರು ಗೆದ್ದರೆ ಎಲ್ಲವೂ ಸರಿ ಇದೆ ಎನ್ನುತ್ತಾರೆ. ಸೋಲಿನ ಭೀತಿಯಿಂದ ಮಮತಾ ಬ್ಯಾನರ್ಜಿಗೆ ಈ ಅಪನಂಬಿಕೆ ಮೂಡಿದೆ. ಇದು ಪ್ರಜಾಪ್ರಭುತ್ವದಲ್ಲಿ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.