ಉಡುಪಿ : ಚುನಾವಣೋತ್ತರ ಸಮೀಕ್ಷೆ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಈ ಬಾರಿ ಲೋಕಸಮರದಲ್ಲಿ ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ನಿಜವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕುವುದಾಗಿ ಸಿಎಂ ಹೇಳಿಕೆ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಯಿಂದ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಯಾಗಿದೆ. 350ಕ್ಕೂ ಅಧಿಕ ಸ್ಥಾನ ಪಡೆಯುವ ನಮ್ಮ ನಿರೀಕ್ಷೆ ನಿಜವಾಗಿದೆ. ದೇಶದಲ್ಲಿ ಮಹಾಮೈತ್ರಿ ನುಚ್ಚುನೂರಾಗಲಿದೆ. ಕರ್ನಾಟಕದಲ್ಲಿ 22ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮಮತಾ ಬ್ಯಾನರ್ಜಿಗೆ ಈ ದೇಶದ ಮತದಾರರ ಮೇಲೆ ನಂಬಿಕೆಯೇ ಇಲ್ಲ. ಹಾಗಾಗಿ ಮತಯಂತ್ರದ ಮೇಲೂ ನಂಬಿಕೆ ಇಲ್ಲ. ಆದರೆ, ಅವರು ಗೆದ್ದರೆ ಎಲ್ಲವೂ ಸರಿ ಇದೆ ಎನ್ನುತ್ತಾರೆ. ಸೋಲಿನ ಭೀತಿಯಿಂದ ಮಮತಾ ಬ್ಯಾನರ್ಜಿಗೆ ಈ ಅಪನಂಬಿಕೆ ಮೂಡಿದೆ. ಇದು ಪ್ರಜಾಪ್ರಭುತ್ವದಲ್ಲಿ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…