ಹಾವೇರಿ : ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಗಣಪತಿ ಉತ್ಸವದಲ್ಲಿ ಮಾತನಾಡಿದ ಅವರು, ಇಂದು ಹಸಿರು ಬಾವುಟ ಹಾರಿಸೋಕೆ ಒಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿರು ಬಾವುಟನೇ ಇಲ್ದಂಗೆ ಮಾಡ್ತೀವಿ. ಕೆಲ ಸ್ವಾಮೀಜಿಗಳು ಸನಾತನ ಧರ್ಮ ಉಳಿಸುವ ಕೆಲಸ ಮಾಡುತ್ತಿಲ್ಲ.
2024ರ ಚುನಾವಣೆಯಲ್ಲಿ ಮತ್ತೆ ಮೊದಿಯನ್ನು ಬೆಂಬಲಿಸಬೇಕು. ಮುಂದಿನ 25 ವರ್ಷ ದೇಶ ನಮ್ಮ ಕೈಯಲ್ಲೇ ಇರುತ್ತದೆ.ಧರ್ಮ ಉಳಿಸುವ ಕೆಲಸ ಮಾಡಬೇಕಾದವರು ಮಂತ್ರಿ ಮಾಡಿ ಮುಖ್ಯಮಂತ್ರಿ ಮಾಡಿ ಅಂತಾ ಲಾಬಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇಂಡಿಯಾ ಅಂತಾ ಇಟ್ಟವರು ಬ್ರಿಟಿಷರು. ನೀವು ಭಾರತೀಯಾರ? ಅಥವಾ ಬ್ರಿಟಿಷರಿಗೆ ಹುಟ್ಟಿದ್ದೀರಾ? ನಾವು ಭಾರತೀಯರು ನಮ್ಮ ಭಾರತದ ಒಂದು ಟವರ್ ಮೇಲೆ ಒಂದು ಧ್ವಜ ಹಾರಿಸಿದಕ್ಕೆ ಉರಿಯುತ್ತದೆ. ನಮಗಿಂತ ದೊಡ್ಡ ಧ್ವಜ ಹಾರಿಸಿದರೆ ಬಹಳ ದೊಡ್ಡವರಾದ್ರಾ? ನಿಮ್ಮ ಅಪ್ಪಂದಿರಿಗೆ ಹುಟ್ಟಿದ್ದೀರಾ? ನಾವು ಚಂದ್ರನ ಮೇಲೆ ತ್ರಿವಣಧ್ವಜ ಹಾರಿಸಿದ್ದೇವೆ. ನಿಮ್ಮಂಪ್ಪನಿಗೆ ಹುಟ್ಟಿದ್ರೆ ಅಲ್ಲಿ ಹೋಗಿ ಧ್ವಜ ಹಾರಿಸಿ. ಅನ್ನ ತಿನ್ನೋದು ಭಾರತದ್ದು, ನೀರು ಕುಡಿಯುವುದು ಭಾರತದ್ದು. ಮತ್ತೆ ಪಾಕಿಸ್ತಾನಕ್ಕೆ ಜೈ ಅಂತೀರಾ ಅಲ್ಲ, ಯಾರಿಗೆ ಹುಟ್ಟಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…