ಬೆಂಗಳೂರು : ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ ನೀಡುವುದಾಗಿಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಬಜೆಟ್ನಲ್ಲಿ ಸಹಾಯಧನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಲ್. ವರಲಕ್ಷ್ಮೀ ಈ ಕುರಿತು ಆದೇಶ ಹೊರಡಿಸಿದ್ದಾರೆ. 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ಸಿಗಲಿದೆ.
ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ನಲ್ಲಿ ಕಾಶಿಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಈಗ ಈ ಕುರಿತು ಆದೇಶ ಹೊರಡಿಸಲಾಗಿದೆ.
ರಾಜ್ಯದಿಂದ ಕಾಶಿಯಾತ್ರೆಯನ್ನು ಕೈಗೊಳ್ಳುವ 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂ.ಗಳ ಸಹಾಯಧನ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-366ರಲ್ಲಿನ ಘೋಷಣೆಯಂತೆ ರಾಜ್ಯದಿಂದ ಕಾಶಿಯಾತ್ರೆಯನ್ನು ಕೈಗೊಳ್ಳುವ 30 ಸಾವಿರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂ.ಗಳ ಸಹಾಯಧನವನ್ನು ನೀಡಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಕೆಲವು ದಿನಗಳ ಹಿಂದೆ ಮಾತನಾಡಿದ್ದ ಮುಜರಾಯಿ ಇಲಾಖೆ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ಘೋಷಣೆಯಿಂದ ದೇವಾಲಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಸಿಕ್ಕಿದಂತೆ ಆಗುತ್ತದೆ. ಜೀವಮಾನದಲ್ಲಿ ಒಮ್ಮೆಯಾದರೂ ಕಾಶಿಯಾತ್ರೆ ಮಾಡಬೇಕು ಎಂಬುದು ಬಹುತೇಕ ಹಿಂದೂಗಳ ಕನಸು ಎಂದು ಹೇಳಿದ್ದರು.
ಅನೇಕರಿಗೆ ನಾನಾ ಕಾರಣಗಳಿಂದ ಕಾಶಿಯಾತ್ರೆಗೆ ತೆರಳಲು ಸಾಧ್ಯವಾಗುವುದಿಲ್ಲ. ಸರ್ಕಾರದ ಸಹಾಯಧನದೊಂದಿಗೆ ಆಸಕ್ತರು ಕಾಶಿಯಾತ್ರೆಗೆ ಹೋಗಿ ಬರಲು ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ಮಂದಿರವನ್ನು ವಿಶಿಷ್ಟ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಮೂಲಕ ಐತಿಹಾಸಿಕ ಕಾಶಿಗೆ ದಿವ್ಯಕಾಶಿ-ಭವ್ಯಕಾಶಿ ಎಂದು ಹೆಸರು ಬರುವಂತೆ ಮಾಡಿದ್ದಾರೆ. ರಾಜ್ಯದ ಸಾವಿರಾರು ಯಾತ್ರಾರ್ಥಿಗಳು ಕಾಶಿಗೆ ಭೇಟಿ ನೀಡಿ ವಿಶ್ವನಾಥನ ದರ್ಶನ ಪಡೆಯುತ್ತಾರೆ ಎಂದು ಸಚಿವರು ವಿವರಿಸಿದ್ದರು.\
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…