ಉಡುಪಿ

ಕರ್ನಾಟಕದ ಏಕೀಕರಣಕ್ಕೆ ಧಕ್ಕೆ ಬಂದರೆ ಕಾಂಗ್ರೇಸ್ ಜೆಡಿಎಸ್ ಹೊಣೆ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ, : ಬಜೆಟ್‌ನಲ್ಲಿ ಕೆಲವೇ ಜಿಲ್ಲೆಗಳಿಗೆ ಆದ್ಯತೆ ನೀಡಿ, ಅನ್ಯಾಯಕ್ಕೊಳಗಾದ ಜಿಲ್ಲೆಗಳಲ್ಲಿ ಪ್ರತ್ಯೇಕತೆ ಕೂಗು ಏಳುವಂತೆ ಮಾಡಿದ್ದಲ್ಲದೇ, ಬಳಿಕ ಹೊಣೆಗೇಡಿ ಮಾತಿನಿಂದ ಕೂಗು ಬಲಗೊಳ್ಳುವಂತೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇರ ಹೊಣೆಗಾರರಾಗಿದ್ದಾರೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣಕ್ಕೇನಾದರೂ ಧಕ್ಕೆ ಉಂಟಾದರೆ ಅದರ ಸಂಪೂರ್ಣ ಹೊಣೆಗಾರಿಕೆ ಯನ್ನು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷ ಹೊತ್ತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಕೂಡಲೇ ಉತ್ತರ ಕರ್ನಾಟಕದ ಶಾಸಕರು ಹಾಗೂ ಮಠಾಧೀಶ ರೊಂದಿಗೆ ಮಾತುಕತೆ ನಡೆಸುವ ಮೂಲಕ ಮಾಡಿರುವ ತಪ್ಪು, ತಾರತಮ್ಯ ಸರಿಪಡಿಸುವ ವಿಶ್ವಾಸ ತುಂಬಬೇಕೇ ಹೊರತು, ಪಲಾಯನ ಮಾಡುವುದಲ್ಲ ಎಂದು ಮುಖ್ಯಮಂತ್ರಿಗಳನ್ನು ಚುಚ್ಚಿದರು.

ಕಳೆದ ಬಜೆಟ್ ಭಾಷಣದ ವೇಳೆಯೇ ತಾನು ಈ ಬಗ್ಗೆ ಸರಕಾರಕ್ಕೆ ಎಚ್ಚರಿಸಿದ್ದೆ. ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದರೆ. ಬಜೆಟ್ ನಲ್ಲಿ ಸಮಾನತೆ ಬದಲು ಕೆಲ ಜಿಲ್ಲೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದೇ ಪ್ರತ್ಯೇಕತೆ ಕೂಗಿಗೆ ಕಾರಣವಾಗಿದೆ. ನಮ್ಮ ಹಿರಿಯರ ಹೋರಾಟದಿಂದ ಏಕೀಕರಣಗೊಂಡ ಕರ್ನಾಟಕವನ್ನು ಅದೇ ರೀತಿ ಮುಂದುವರಿಸುವಿರಾ ಅಥವಾ ಇಲ್ಲಾ ಛಿದ್ರ ಕರ್ನಾಟಕ ಬಯಸುವಿರಾ ಎಂದವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಚುನಾವಣೆ ಮುಂದೂಡಿಕೆಗೆ ಸಂಚು: ರಾಜ್ಯದಲ್ಲಿ ಶೀಘ್ರವೇ ನಡೆಯ ಬೇಕಿರುವ ಪೌರಾಡಳಿತ ಚುನಾವಣೆಯನ್ನು ಮುಂದೂಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಯತ್ನಿಸು ತ್ತಿದೆ. ಇದಕ್ಕಾಗಿ ಪೌರಾಡಳಿತದಲ್ಲಿ ತಮ್ಮ ಸರಕಾರ ಜಾರಿಗೆ ತಂದ ಮಹಿಳೆಯರಿಗೆ ಶೇ.50 ಮೀಸಲಾತಿಯನ್ನು ಬದಲಿಸುವ ಹುನ್ನಾರ ನಡೆಯುತ್ತಿದೆ ಎಂದವರು ಆರೋಪಿಸಿದರು.

ಲೋಕಸಭೆ ಚುನಾವಣೆ ನಂತರ ಪೌರಾಡಳಿತ ಚುನಾವಣೆ ನಡೆಸಲು ಈ ಕುತಂತ್ರ ಮಾಡಲಾಗುತ್ತಿದೆ. ಆದುದರಿಂದ ತಕ್ಷಣವೇ ಮೀಸಲಾತಿ ಪಟ್ಟಿಯನ್ನು ನಡೆಸಿ, ಪೌರಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸಲು ದಿನವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

ಸದನ ಸಮಿತಿ ರಚಿಸಿ: ಕೇಂದ್ರದ ಅನುದಾನದಿಂದ ರಾಜ್ಯದಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ 18,000 ಘಟಕಗಳಲ್ಲಿ ಅರ್ಧದಷ್ಟು ಸಹ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಹೆಚ್ಚಿನ ಘಟಕಗಳಲ್ಲಿ ಒಂದು ಲೋಟ ನೀರು ಸಹ ಬಂದಿಲ್ಲ. ಘಟಕಗಳ ಸ್ಥಾಪನೆಯಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ.ಆದುದರಿಂದ ಇದರ ತನಿಖೆಗೆ ಸದನ ಸಮಿತಿಯನ್ನು ರಚಿಸಬೇಕು ಎಂದು ಕೋಟ ಸರಕಾರವನ್ನು ಆಗ್ರಹಿಸಿದರು.

ರಾಜ್ಯದಲ್ಲಿ ಸರಕಾರ ಆಡಳಿತ ನಡೆಸುತ್ತಿಲ್ಲ. ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಾ ಗಲು, ಪ್ರಗತಿ ಪರಿಶೀಲನೆ ನಡೆಸಲು ಇನ್ನೂ ಉಸ್ತುವಾರಿ ಸಚಿವರನ್ನು ನಿಯುಕ್ತಿ ಗೊಳಿಸಿಲ್ಲ. ಇದರಿಂದ ಆಡಳಿತ ವೈಫಲ್ಯ ಉಂಟಾಗಿದೆ. ಆ.15ರಂದು ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣದ ಸಮಯಕ್ಕಾದರೂ ಸರಕಾರ ಜಿಲ್ಲಾ ಉಸ್ತುವಾರಿಗಳನ್ನು ನಿಯುಕ್ತಿಗೊಳಿಸಲಿ ಎಂದವರು ಮನವಿ ಮಾಡಿದರು.

ಪ್ರತ್ಯೇಕತೆಗೆ ಬೆಂಬಲವಿಲ್ಲ: ಕರಾವಳಿಯಲ್ಲಿ ತುಳುನಾಡು ಸೇರಿದಂತೆ ಪ್ರತ್ಯೇಕತೆಯ ಕೂಗಿಗೆ ಬಿಜೆಪಿಯ ಬೆಂಬಲವಿಲ್ಲ. ಆದರೆ ಬಜೆಟ್‌ನಲ್ಲಿ ಅನ್ಯಾಯಕ್ಕೊಳಗಾದ ಜಿಲ್ಲೆಗಳ ಜನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಆಲಿಸಿ ಕ್ರಮಕೈಗೊಳ್ಳಬೇಕು ಎಂದು ಕೋಟ ಒತ್ತಾಯಿಸಿದರು.

ಶಾಸನದ ಬದಲು ಶಾಸ್ತ್ರ ರಾಜ್ಯದಲ್ಲಿ ಈಗ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಶಾಸನದ ಆಧಾರದಲ್ಲಿ ನಡೆಯದೇ ಶಾಸ್ತ್ರದ ಆಧಾರದಲ್ಲಿ ನಡೆಯು ತ್ತಿದೆ. ಹೀಗಾಗಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕಕ್ಕೆ ಇನ್ನೂ ಗಳಿಗೆ ಕೂಡಿ ಬಂದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದರು

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago