ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ.
ದರ ಇಳಿಕೆ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧರಿಸಲಾಗಿದೆ. ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆಯಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಕೇಂದ್ರದ ನೂತನ ಜಿಎಸ್ಟಿ ಪದ್ಧತಿ ಸೆ. 22ರಿಂದ ಜಾರಿಗೆ ಬರಲಿದೆ. ಈ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿತ್ತು. ಇದೀಗ ಕೆಎಂಎಫ್ ದರ ಇಳಿಕೆಗೆ ಸಜ್ಜಾಗುವ ಮೂಲಕ ರಾಜ್ಯದ ಜನರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…