ವಿಜಯಪುರ : ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.
ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.
ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…