ಬೆಂಗಳೂರು: ಕರ್ನಾಟಕದ ವಾಹನಗಳ ಮೇಲೆ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕಲ್ಲು ತೂರಾಟ, ಮಸಿ ಬಳಿಯುತ್ತಿರೋ ಪ್ರಕರಣ ಹೆಚ್ಚಾದ ಕಾರಣದಿಂದಾಗಿ, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಸಂಬಂಧ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲಿ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸೋ ಮುನ್ಸೂಚನೆಯಿದ್ದು, ಇದರ ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರೋದಾಗಿ ತಿಳಿಸಿದೆ.
ರಾಯಚೂರು, ಬೆಳಗಾವಿ, ಕಲಬುರ್ಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಗಳು ತೆರಳೋದು ನಿಲುಗಡೆಯಾಗಿದೆ. ಈ ಮೂಲಕ ಸಾರಿಗೆ ಬಸ್ ಗಳ ಮೇಲೆ ಎಂಇಎಸ್ ಪುಂಡರಿಂದ ಹಾನಿಯಾಗೋದನ್ನು ತಪ್ಪಿಸಲು ಈ ಕ್ರಮವನ್ನು ಸಾರಿಗೆ ನಿಗಮ ಅನುಸರಿಸಿದೆ.
ಇಂದು ಬೆಳಿಗ್ಗೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೈನಿಕರೊಬ್ಬರನ್ನು ಬಿಟ್ಟು ಬರಲು ತೆರಳಿದ್ದಂತ ಕಾರಿನ ಮೇಲೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದರು. ಕಾರಿನ ಗ್ಲಾಸ್ ಗಳನ್ನು ಪುಡಿ ಮಾಡಿ ದುಶ್ ಕೃತ್ಯವೆಸಗಿದ್ದರು. ಈ ಹಿನ್ನಲೆಯಲ್ಲಿ ಈಗ ಸಾರಿಗೆ ಬಸ್ ಸಂಚಾರ ಕೂಡ ಸ್ಥಗಿತಗೊಳಿಸಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…