Featured

ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ; ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ  – Vishwanews24

ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ; ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ  – Vishwanews24

ಬೆಂಗಳೂರು: ಕರ್ನಾಟಕದ ವಾಹನಗಳ ಮೇಲೆ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕಲ್ಲು ತೂರಾಟ, ಮಸಿ ಬಳಿಯುತ್ತಿರೋ ಪ್ರಕರಣ ಹೆಚ್ಚಾದ ಕಾರಣದಿಂದಾಗಿ, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಈ ಸಂಬಂಧ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲಿ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸೋ ಮುನ್ಸೂಚನೆಯಿದ್ದು, ಇದರ ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರೋದಾಗಿ ತಿಳಿಸಿದೆ.

ರಾಯಚೂರು, ಬೆಳಗಾವಿ, ಕಲಬುರ್ಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಗಳು ತೆರಳೋದು ನಿಲುಗಡೆಯಾಗಿದೆ. ಈ ಮೂಲಕ ಸಾರಿಗೆ ಬಸ್ ಗಳ ಮೇಲೆ ಎಂಇಎಸ್ ಪುಂಡರಿಂದ ಹಾನಿಯಾಗೋದನ್ನು ತಪ್ಪಿಸಲು ಈ ಕ್ರಮವನ್ನು ಸಾರಿಗೆ ನಿಗಮ ಅನುಸರಿಸಿದೆ.

ಇಂದು ಬೆಳಿಗ್ಗೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೈನಿಕರೊಬ್ಬರನ್ನು ಬಿಟ್ಟು ಬರಲು ತೆರಳಿದ್ದಂತ ಕಾರಿನ ಮೇಲೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದರು. ಕಾರಿನ ಗ್ಲಾಸ್ ಗಳನ್ನು ಪುಡಿ ಮಾಡಿ ದುಶ್ ಕೃತ್ಯವೆಸಗಿದ್ದರು. ಈ ಹಿನ್ನಲೆಯಲ್ಲಿ ಈಗ ಸಾರಿಗೆ ಬಸ್ ಸಂಚಾರ ಕೂಡ ಸ್ಥಗಿತಗೊಳಿಸಲಾಗಿದೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

37 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

57 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago