ಯಲ್ಲಾಪುರ: ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕದ ಸರಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ಶವವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಟೀಕಿಸಿದ್ದಾರೆ.
ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಇಡಲಾಗಿದೆ. ಈ ಸರಕಾರ ಜೀವಂತ ಇಲ್ಲ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರ ಸಮಕ್ಷಮದಲ್ಲಿ ಕೋರ್ಟಿಗೆ ತರುವಾಗ ಅವನ ಹಣೆಗೆ ಮುತ್ತಿಟ್ಟಿದ್ದಾರೆ. ಸರಕಾರ ಏನು ಮಾಡುತ್ತಿದೆ? ಗೃಹ ಇಲಾಖೆ ಏನು ಮಾಡುತ್ತಿದೆ. ಪೊಲೀಸರ ಮೌನವೇಕೆ? ಎಲ್ಲಿದೆ ಕಾನೂನು ವ್ಯವಸ್ಥೆ? ಎಂದು ಪ್ರಶ್ನಿಸಿದರು.
ಐಜಿ ಬರ್ತಾರೆ ಎಂದು ಬಿಜೆಪಿ ಕಾರ್ಯಕರ್ತನನ್ನು ಕರೆದುಕೊಂಡು ಹೋಗಿ ಮೈ ಹುಡಿ ಮಾಡಿದರಂತೆ. ಅದ್ಯಾಕೆ ಎಂದು ಕೇಳಿದರೆ 40 ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದರಂತೆ. ಏನು ರಾಜ್ಯ ಇದು?. ರಾಜ್ಯದ ಒಂದು ಲಕ್ಷ ಪೊಲೀಸರಿಗೆ ಅನ್ಯಾಯ ಆದಾಗ ಬೀದಿಗಿಳಿದು ಪೊಲೀಸರಿಗೆ ನ್ಯಾಯ ಕೇಳಿದ್ದು ಬಿಜೆಪಿ ಎಂಬುದನ್ನು ಮರೆಯಬಾರದು ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…