ಯಲ್ಲಾಪುರ: ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕದ ಸರಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ಶವವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಟೀಕಿಸಿದ್ದಾರೆ.
ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಇಡಲಾಗಿದೆ. ಈ ಸರಕಾರ ಜೀವಂತ ಇಲ್ಲ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರ ಸಮಕ್ಷಮದಲ್ಲಿ ಕೋರ್ಟಿಗೆ ತರುವಾಗ ಅವನ ಹಣೆಗೆ ಮುತ್ತಿಟ್ಟಿದ್ದಾರೆ. ಸರಕಾರ ಏನು ಮಾಡುತ್ತಿದೆ? ಗೃಹ ಇಲಾಖೆ ಏನು ಮಾಡುತ್ತಿದೆ. ಪೊಲೀಸರ ಮೌನವೇಕೆ? ಎಲ್ಲಿದೆ ಕಾನೂನು ವ್ಯವಸ್ಥೆ? ಎಂದು ಪ್ರಶ್ನಿಸಿದರು.
ಐಜಿ ಬರ್ತಾರೆ ಎಂದು ಬಿಜೆಪಿ ಕಾರ್ಯಕರ್ತನನ್ನು ಕರೆದುಕೊಂಡು ಹೋಗಿ ಮೈ ಹುಡಿ ಮಾಡಿದರಂತೆ. ಅದ್ಯಾಕೆ ಎಂದು ಕೇಳಿದರೆ 40 ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದರಂತೆ. ಏನು ರಾಜ್ಯ ಇದು?. ರಾಜ್ಯದ ಒಂದು ಲಕ್ಷ ಪೊಲೀಸರಿಗೆ ಅನ್ಯಾಯ ಆದಾಗ ಬೀದಿಗಿಳಿದು ಪೊಲೀಸರಿಗೆ ನ್ಯಾಯ ಕೇಳಿದ್ದು ಬಿಜೆಪಿ ಎಂಬುದನ್ನು ಮರೆಯಬಾರದು ಎಂದರು.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…