Featured

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ : ನೂತನ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ -Vishwanews24

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ : ನೂತನ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ -Vishwanews24

ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವ ಮತ್ತು ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಇಂದು ನಡೆದ ಸಚಿವ ಸಭೆಯಲ್ಲಿ ಈ  ಕುರಿತು ತೀರ್ಮಾನ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು  ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.

ಈ ಹಿಂದೆ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು  ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.

Vishwa News 24

Recent Posts

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 seconds ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago