ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವ ಮತ್ತು ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಇಂದು ನಡೆದ ಸಚಿವ ಸಭೆಯಲ್ಲಿ ಈ ಕುರಿತು ತೀರ್ಮಾನ ಮಾಡಲಾಗಿದೆ.
ಈ ಹಿಂದೆ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…