ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್ಡೌನ್ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಪ್ರಾರ್ಥನಾ ಸ್ಥಳಗಳಾದ ದೇವಸ್ಥಾನ, ಮಸೀದಿ, ಗುರುದ್ವಾರ ಹಾಗೂ ಇತರೆ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಪೂಜೆ ಹಾಗೂ ಪ್ರಾರ್ಥನೆ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಆದೇಶವು ಭಾನುವಾರದಿಂದ (ಜುಲೈ 25) ಜಾರಿಗೆ ಬರಲಿದೆ. ಧಾರ್ಮಿಕ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳು ಹಾಗೂ ಕೋವಿಡ್ 19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿಯೂ ಪೂಜಾ ವಿಧಿವಿಧಾನ ಪಾಲಿಸಲು ಅನುಮತಿ ಕೊಡಲಾಗಿದೆ. ಆದರೆ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಜನಸಮೂಹ ಸೇರುವಿಕೆ ಮೇಲಿನ ನಿರ್ಬಂಧ ಮುಂದುವರಿಯಲಿದೆ.
ಅಲ್ಲದೆ, ಮನರಂಜನಾ ಪಾರ್ಕ್ಗಳು ಹಾಗೂ ಅದೇ ರೀತಿಯ ಸ್ಥಳಗಳನ್ನು ಮತ್ತೆ ಆರಂಭಿಸಲು ಅವಕಾಶ ಕೊಡಲಾಗಿದೆ. ಇಲ್ಲಿ ಕೂಡ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ. ಮನರಂಜನಾ ಪಾರ್ಕ್ಗಳನ್ನು ತೆರೆದಿದ್ದರೂ, ಅಲ್ಲಿ ಮುಖ್ಯವಾಗಿ ನಡೆಯುವ ಜಲ ಕ್ರೀಡೆ ಅಥವಾ ನೀರಿಗೆ ಸಂಬಂಧಿಸಿದ ಸಾಹಸ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…