ಬೆಂಗಳೂರು: ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸುರಂಗ ರಸ್ತೆ ನಿರ್ಮಾಣಕ್ಕೆ ಎಷ್ಟು ಮಂದಿ ಗುತ್ತಿಗೆದಾರರು ಟೆಂಡರ್ ಅರ್ಜಿ ಹಾಕಿದ್ದಾರೆ ಎಂದು ಒಂದೆರಡು ದಿನಗಳಲ್ಲಿ ತಿಳಿಯುತ್ತದೆ. ನಮ್ಮ ಸುರಂಗ ರಸ್ತೆಯ ಸ್ವರೂಪ, ಗಾತ್ರದ ಬಗ್ಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ, ಮುಂಬೈ, ದಿಲ್ಲಿ, ಪುಣೆಯವರು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಶೇ.50ರಷ್ಟು ಭಾಗ ಕಲ್ಲಿದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೆ ನಾವು ಮೆಟ್ರೋ ಯೋಜನೆ ಮಾಡಿದ್ದೇವೆ. ಮೆಟ್ರೋ ಶೇ.50ರಷ್ಟು ಮಾರ್ಗ ಸುರಂಗ ರೂಪದಲ್ಲಿದೆ. ಆಗ ಯಾರೂ ಮಾತನಾಡಲಿಲ್ಲ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ. ಬೇರೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದು ನನಗಾಗಿ ಮಾಡುತ್ತಿರುವ ಯೋಜನೆಯಲ್ಲ. ಇದು ಮುಂದಿನ ಪೀಳಿಗೆಯ ಭವಿಷ್ಯಕ್ಕೆ, ಬೆಂಗಳೂರಿಗಾಗಿ ಎಂದು ಅವರು ತಿರುಗೇಟು ನೀಡಿದರು.
ಮುಂಬೈ, ಪುಣೆಯಲ್ಲಿ ಸುರಂಗ ರಸ್ತೆ ಮಾಡಿದ್ದಾರೆ. ಅಲ್ಲಿ ಎಲ್ಲವೂ ಸರಿಯಾಗಿದೆ. ಕರ್ನಾಟಕದಲ್ಲಿ ಏನೆ ಮಾಡಲು ಹೋದರೂ ವಿರೋಧ ಮಾಡುತ್ತಿದ್ದಾರೆ. ನಾನು ವಿಧಾನಸೌಧದಲ್ಲಿ ಬೆಂಗಳೂರಿನ ಶಾಸಕರನ್ನು ಸಭೆಗೆ ಕರೆದು ಸುರಂಗ ರಸ್ತೆ ವಿಚಾರದಲ್ಲಿ ಏನೇನು ಮಾಡಲು ಹೋರಟಿದ್ದೇನೆ ಎಂದು ಹೇಳಿದಾಗ, ಎಲ್ಲರೂ ಒಪ್ಪಿಕೊಂಡಿದ್ದರು ಎಂದು ಶಿವಕುಮಾರ್ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…