ಬೆಂಗಳೂರು: ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸುರಂಗ ರಸ್ತೆ ನಿರ್ಮಾಣಕ್ಕೆ ಎಷ್ಟು ಮಂದಿ ಗುತ್ತಿಗೆದಾರರು ಟೆಂಡರ್ ಅರ್ಜಿ ಹಾಕಿದ್ದಾರೆ ಎಂದು ಒಂದೆರಡು ದಿನಗಳಲ್ಲಿ ತಿಳಿಯುತ್ತದೆ. ನಮ್ಮ ಸುರಂಗ ರಸ್ತೆಯ ಸ್ವರೂಪ, ಗಾತ್ರದ ಬಗ್ಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ, ಮುಂಬೈ, ದಿಲ್ಲಿ, ಪುಣೆಯವರು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಶೇ.50ರಷ್ಟು ಭಾಗ ಕಲ್ಲಿದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೆ ನಾವು ಮೆಟ್ರೋ ಯೋಜನೆ ಮಾಡಿದ್ದೇವೆ. ಮೆಟ್ರೋ ಶೇ.50ರಷ್ಟು ಮಾರ್ಗ ಸುರಂಗ ರೂಪದಲ್ಲಿದೆ. ಆಗ ಯಾರೂ ಮಾತನಾಡಲಿಲ್ಲ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ. ಬೇರೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದು ನನಗಾಗಿ ಮಾಡುತ್ತಿರುವ ಯೋಜನೆಯಲ್ಲ. ಇದು ಮುಂದಿನ ಪೀಳಿಗೆಯ ಭವಿಷ್ಯಕ್ಕೆ, ಬೆಂಗಳೂರಿಗಾಗಿ ಎಂದು ಅವರು ತಿರುಗೇಟು ನೀಡಿದರು.
ಮುಂಬೈ, ಪುಣೆಯಲ್ಲಿ ಸುರಂಗ ರಸ್ತೆ ಮಾಡಿದ್ದಾರೆ. ಅಲ್ಲಿ ಎಲ್ಲವೂ ಸರಿಯಾಗಿದೆ. ಕರ್ನಾಟಕದಲ್ಲಿ ಏನೆ ಮಾಡಲು ಹೋದರೂ ವಿರೋಧ ಮಾಡುತ್ತಿದ್ದಾರೆ. ನಾನು ವಿಧಾನಸೌಧದಲ್ಲಿ ಬೆಂಗಳೂರಿನ ಶಾಸಕರನ್ನು ಸಭೆಗೆ ಕರೆದು ಸುರಂಗ ರಸ್ತೆ ವಿಚಾರದಲ್ಲಿ ಏನೇನು ಮಾಡಲು ಹೋರಟಿದ್ದೇನೆ ಎಂದು ಹೇಳಿದಾಗ, ಎಲ್ಲರೂ ಒಪ್ಪಿಕೊಂಡಿದ್ದರು ಎಂದು ಶಿವಕುಮಾರ್ ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…