Featured

ಕರ್ನಾಟಕ ಉಪಚುನಾವಣೆ : ಗೆಲುವು ನಮ್ಮದೇ ಎಂದ ಎನ್‌ಡಿಎ ನಾಯಕರು ; ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ ಎಂದ ಕಾಂಗ್ರೆಸ್‌ – vishwanews24

ಕರ್ನಾಟಕ ಉಪಚುನಾವಣೆ : ಗೆಲುವು ನಮ್ಮದೇ ಎಂದ ಎನ್‌ಡಿಎ ನಾಯಕರು ; ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ ಎಂದ ಕಾಂಗ್ರೆಸ್‌

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ  ಬಿಗ್‌ ಶಾಕ್‌ ಸಿಗುವ ಸಾಧ್ಯತೆಯಿದೆ.

ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಸಮೀಕ್ಷೆಯಲ್ಲಿ ಸಂಡೂರು ಮಾತ್ರ ಈ ಬಾರಿ ಕೈ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ.

ಪಿ-ಮಾರ್ಕ್ ಸಮೀಕ್ಷೆ ಚನ್ನಪಟ್ಟಣದಲ್ಲಿ ಜೆಡಿಎಸ್‌, ಶಿಗ್ಗಾವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಉಪಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ನೋಡಿ ಎನ್‌ಡಿಎ ಮೈತ್ರಿಕೂಟದಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಕಾಂಗ್ರೆಸ್‌ ಸಮೀಕ್ಷಾ ವರದಿಯನ್ನು ಒಪ್ಪಿಕೊಂಡಿಲ್ಲ. ಹಿಂದೆ ಹಲವಾರು ಸಮೀಕ್ಷೆಗಳು ಸುಳ್ಳಾಗಿವೆ. ಹೀಗಾಗಿ ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ ಎಂದು ಕಾಂಗ್ರೆಸ್‌ ಹೇಳುತ್ತಿದೆ.

ಎನ್‌ಡಿಎ ಪಾಳೆಯದಲ್ಲಿ ವಿಶ್ವಾಸ:
ಶಿಗ್ಗಾಂವಿ ಗೆಲುವು ನಿಶ್ಚಿತ ಎನ್ನುವ ವಿಶ್ವಾಸದಲ್ಲಿ ಮೈತ್ರಿ ನಾಯಕರಿದ್ದಾರೆ. ಸಂಸದ ಬೊಮ್ಮಾಯಿ ಸ್ವಕ್ಷೇತ್ರದ ಮೇಲೆ ಹಿಡಿತ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಬಿಜೆಪಿಗೆ ಪ್ಲಸ್ ಆಗಲಿದೆ ಎನ್ನುವ ಲೆಕ್ಕಾಚಾರವನ್ನು ಹಾಕಿಕೊಂಡಿದ್ದಾರೆ.

ಸಂಡೂರಿನಲ್ಲೂ ಈ ಬಾರಿ ಅಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಆಂತರಿಕ ಕಚ್ಚಾಟ ನಮಗೆ ಪೂರಕ ಆಗಲಿದೆ. ಜನಾರ್ದನ ರೆಡ್ಡಿ ಕಮಾಲ್ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಜಯಗಳಿಸಲಿದ್ದಾರೆ.

ಜಮೀರ್ ಹೇಳಿಕೆಗಳು, ದೇವೇಗೌಡರ ಪ್ರವೇಶ, ನಿಖಿಲ್ ಮೇಲೆ ಅನುಕಂಪ ಎಲ್ಲ ಕೆಲಸ ಮಾಡಲಿದೆ. ಯೋಗೇಶ್ವರ್‌ ಕೊನೆ ಕ್ಷಣದಲ್ಲಿ ಸೇರಿದ್ದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ನಮ್ಮ ಒಗ್ಗಟ್ಟಿನ ಶ್ರಮ ಕೈ ಹಿಡಿಯಲಿದೆ ಎಂದು ದೋಸ್ತಿ ನಾಯಕರು ಹೇಳುತ್ತಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

17 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

17 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

18 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

18 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

20 hours ago