Featured

ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್‌ -Vishwanews24

ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್‌ -Vishwanews24

ಬೆಂಗಳೂರು: ರಾಜ್ಯ ಸರಕಾರದ ಮರಾಠ ನಿಗಮ ರಚನೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ ಇಂದು ವಿವಿಧ ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ. ಆದರೆ ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಹೈಕೋರ್ಟ್‌ ಖಡಕ್‌ ಎಚ್ಚರಿಕೆ ನೀಡಿದೆ.

ಬಂದ್‌ ಆಚರಿಸುವವರು ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್‌ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಲೆಟ್ಸ್‌ ಕಿಡ್‌ ಫೌಂಡೇಷನ್‌ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ”ಈ ಬಂದ್‌ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ.

ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,”ಎಂದು ಹೇಳಿತು. ”ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ. ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು. ಆದರೆ, ಸರಕಾರ ಕಾಯಿದೆಯ ನಿಯಮಗಳನ್ನು ಅಮಾನತಿನಲ್ಲಿಟ್ಟು, ಅದಕ್ಕೆ ತಿದ್ದುಪಡಿ ತರುತ್ತೇವೆ ಎನ್ನುತ್ತಿದೆ. ಕಡೇ ಪಕ್ಷ ಕಾಯಿದೆಗೆ ತಿದ್ದುಪಡಿ ಮಾಡುವುದಕ್ಕೂ ಮುಂದಾಗಿಲ್ಲ. ಸರಕಾರದ ಈ ನಡೆ ಸರಿಯಾದುದಲ್ಲ,” ಎಂದು ಆಕ್ಷೇಪಿಸಿತು.

 

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

6 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

11 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

11 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

12 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

12 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

12 hours ago