ಕಾಪು: ರಾಜ್ಯ ಬಿಜೆಪಿ ರೈತರ ಸಾಲ ಮನ್ನ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕೊಟ್ಟಿರುವ ಹಿನ್ನಲೆಯಲ್ಲಿ ಬಂದ್ ಬೆಂಬಲಿಸಿ ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ” ಚುನಾವಣಾ ಪೂರ್ವಭಾವಿಯಾಗಿ ನೀಡಿದ ಪ್ರಣಾಲಿಕೆ ಪ್ರಕಾರ ಕುಮಾರಸ್ವಾಮಿ ನಡೆಯುತ್ತಿಲ್ಲ,24ಗಂಟೆಯಲ್ಲಿ ಸಾಲಮನ್ನ ಮಾಡುತ್ತೆನೆಂದು ಹೇಳಿದ ಇವರು ಈಗ ಮಾತಿನ ವರಸೆ ಬದಲಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಮತ್ತು ಕುಮಾರಸ್ವಾಮಿ ಕಾಂಗ್ರೇಸ್ ನ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ತದನಂತರ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡುತ್ತ” ರಾಜ್ಯದಲ್ಲಿ ಜನರನ್ನ ಕೊಳ್ಳೆ ಹೊಡೆಯುವ ಪಕ್ಷಗಳು ಸರ್ಕಾರ ನಡೆಸುತ್ತಿದೆ , ಬಡವರ ರೈತರ ಬಗ್ಗೆ ಚೂರು ಕರುಣೆಯಿಲ್ಲದಂತೆ ವರ್ತಿಸುತ್ತಿದ್ದು ಇದು ಕಾಂಗ್ರೇಸ್ ಮತ್ತು ಜೆಡಿಎಸ್ ನ ಅನೈತಿಕ ಸಂಬಂಧದ ಪರಮಾವಧಿ , ರಾಜ್ಯದ ಜನರ ಮುಲಾಜಿನಲಿಲ್ಲ ಕಾಂಗ್ರೆಸ್ ನ ಮುಲಾಜಿನಲ್ಲಿದ್ದೆನೆಂದು ರಾಜ್ಯದ ಮುಖ್ಯಮಂತ್ರಿಗೆ ಹೇಳಲು ನಾಚಿಕೆಯಾಗ್ಬೇಕು ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ,ಮಿಥುನ್ ಹೆಗ್ಡೆ,ಗಂಗಾಧರ್ ಸುವರ್ಣ, ಯುವಮೋರ್ಚ ಅಧ್ಯಕ್ಷ ಪ್ರವೀಣ್ ಪೂಜಾರಿ,ಶಿಲ್ಪಾ ಜಿ ಸುವರ್ಣ, ಕೇಸರಿ ಉಚ್ಚಿಲ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…