Featured

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ – vishwanews24

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು ಕಾಣುತ್ತಿತ್ತು.

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್​, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆ. ಇದರೊಂದಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ.

ಇನ್ನು ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ನಿನ್ನೆ ರಾತ್ರಿಯಿಂದ ಪುರೋಹಿತರಾದ ನಾಗೇಂದ್ರ ಭಾರದ್ವಾಜ್ ತಂಡದಿಂದ ಬಿಜೆಪಿ ಕಚೇರಿಯಲ್ಲಿ ನಡೆದ ವಾಸ್ತು ಪೂಜೆ, ಗಣ ಹೋಮ, ದುರ್ಗಾ ಹೋಮ, ಸುದರ್ಶನ ಹೋಮ ಮತ್ತು ತ್ರೈಲೋಕ್ಯ ಸುಂದರಿ ಹೋಮ ಮತ್ತು ಪೂಜಾ ಕಾರ್ಯಗಳು ನಡೆದಿದ್ದವು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

20 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

53 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago