Featured

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ  – Vishwanews24

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ

ಬೆಂಗಳೂರು: ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸುವ ಕೊನೇ ದಿನಾಂಕವನ್ನು ಮತ್ತೂಂದು ವರ್ಷಕ್ಕೆ ವಿಸ್ತರಿಸಲು ಅವಕಾಶ ಮಾಡಿಕೊಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022 ಅನ್ನು ವಿಧಾನಸಭೆಯಲ್ಲಿ  ಮಂಡಿಸಲಾಯಿತು.

ವಿಧೇಯಕ ಮಂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌, ಅನಧಿಕೃತ ಸಾಗುವಳಿ ವಿಚಾರಕ್ಕೆ ಸಂಬಂಧಿಸಿ 2005ರ ಜ. 1ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ, 2018ರ ಮಾ. 17ರಿಂದ 2019ರ ಮಾ. 16ರ ವರೆಗೆ ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ 2019ರ ಮಾ. 10ರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿರಲಿಲ್ಲ. ಅವಧಿ ವಿಸ್ತರಿಸುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಮನವಿ ಬಂದಿತ್ತು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವಿಧಾನಮಂಡಳದ ಅಧಿವೇಶನ ಇಲ್ಲದ ಕಾರಣ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ 2022ರ ಮೇ 26ರಂದು ಆಧ್ಯಾದೇಶ ಹೊರಡಿಸಲಾಗಿತ್ತು. ಈಗ ಪ್ರಸಕ್ತ ಅಧಿವೇಶನದಲ್ಲಿ ಆಧ್ಯಾದೇಶದ ಬದಲಿಗೆ ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ಹೇಳಿದರು.

ಇದೇ ವೇಳೆ 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರೇಷ್ಮೆಹುಳು ಬಿತ್ತನೆ ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ನಿಯಮ ವಿಧೇಯಕ 2022 ಅನ್ನು ಮಂಡಿಸಲಾಯಿತು.

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌..ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ – Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago