Featured

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ  – Vishwanews24

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ

ಬೆಂಗಳೂರು: ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸುವ ಕೊನೇ ದಿನಾಂಕವನ್ನು ಮತ್ತೂಂದು ವರ್ಷಕ್ಕೆ ವಿಸ್ತರಿಸಲು ಅವಕಾಶ ಮಾಡಿಕೊಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022 ಅನ್ನು ವಿಧಾನಸಭೆಯಲ್ಲಿ  ಮಂಡಿಸಲಾಯಿತು.

ವಿಧೇಯಕ ಮಂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌, ಅನಧಿಕೃತ ಸಾಗುವಳಿ ವಿಚಾರಕ್ಕೆ ಸಂಬಂಧಿಸಿ 2005ರ ಜ. 1ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ, 2018ರ ಮಾ. 17ರಿಂದ 2019ರ ಮಾ. 16ರ ವರೆಗೆ ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ 2019ರ ಮಾ. 10ರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿರಲಿಲ್ಲ. ಅವಧಿ ವಿಸ್ತರಿಸುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಮನವಿ ಬಂದಿತ್ತು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವಿಧಾನಮಂಡಳದ ಅಧಿವೇಶನ ಇಲ್ಲದ ಕಾರಣ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ 2022ರ ಮೇ 26ರಂದು ಆಧ್ಯಾದೇಶ ಹೊರಡಿಸಲಾಗಿತ್ತು. ಈಗ ಪ್ರಸಕ್ತ ಅಧಿವೇಶನದಲ್ಲಿ ಆಧ್ಯಾದೇಶದ ಬದಲಿಗೆ ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ಹೇಳಿದರು.

ಇದೇ ವೇಳೆ 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರೇಷ್ಮೆಹುಳು ಬಿತ್ತನೆ ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ನಿಯಮ ವಿಧೇಯಕ 2022 ಅನ್ನು ಮಂಡಿಸಲಾಯಿತು.

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌..ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ – Vishwanews24

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago