Featured

ಕರ್ನಾಟಕ ಮಾದರಿ ಅನುಸರಿಸಿ ಅಸ್ಸಾಂ ಚುನಾವಣೆ ಗೆಲ್ಲುತ್ತೀರಿ ಎಂದು AI ಹೇಳುತ್ತದೆ : ಬಿಜೆಪಿ ಕಾಲೆಳೆದ ಡಿಸಿಎಂ – vishwanews24

ಕರ್ನಾಟಕ ಮಾದರಿ ಬಳಸಿ ಅಸ್ಸಾಂ ಚುನಾವಣೆ ಗೆಲ್ಲಬಹುದೆಂದು AI ಹೇಳುತ್ತದೆ: ವಿಪಕ್ಷ ಸದಸ್ಯರ ಕಾಲೆಳೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಅಸ್ಸಾಂಗೆ ಹೋದಾಗ, ಅಲ್ಲಿನ ಚುನಾವಣೆ ಗೆಲ್ಲುವುದು ಹೇಗೆ ಎಂದು ಎಐ (ಕೃತಕ ಬುದ್ಧಿಮತ್ತೆ) ಮೂಲಕ ಪ್ರಶ್ನೆ ಕೇಳಿದೆ, ಅದಕ್ಕೆ ನೀವು ಕರ್ನಾಟಕ ಮಾದರಿ ಅನುಸರಿಸಿ ಅಸ್ಸಾಂ ಚುನಾವಣೆ ಗೆಲ್ಲುತ್ತೀರಿ ಎಂದು ಎಐ ಹೇಳುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸದಸ್ಯರ ಕಾಲೆಳೆದರು.

ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ, ರಾಜ್ಯದಲ್ಲಿ ಆಡಳಿತ ಸುಧಾರಣೆ ಕುರಿತು ಎಐ(ಕೃತಕ ಬುದ್ಧಿಮತ್ತೆ) ಬಳಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಈಗ ನಾವೆಲ್ಲರೂ ಎಐ ಹೊಸಯುಗಕ್ಕೆ ಕಾಲಿಡುತ್ತಿದ್ದೇವೆ. ಈ ಬಗ್ಗೆ ಪ್ರಪಂಚದೆಲ್ಲೆಡೆ ಚರ್ಚೆಯಾಗುತ್ತಿದ್ದು, ಪ್ರಧಾನಮಂತ್ರಿಗಳು ಈ ವಿಚಾರವಾಗಿ ದೊಡ್ಡ ಸಮ್ಮೇಳನ ನಡೆಸಿದರು. ನ್ಯಾಯಾಲಯಗಳಲ್ಲಿ ಇದರ ಬಳಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಿಬಿಎಸ್ಸಿ ಪಠ್ಯಕ್ರಮದಲ್ಲಿ 3ರಿಂದ 8ನೇ ತರಗತಿವರೆಗೆ ಈ ವಿಚಾರವನ್ನು ಪಠ್ಯದಲ್ಲಿ ಸೇರಿಸಲು ತಿಳಿಸಲಾಗಿದೆ ಎಂದರು.

ಇದನ್ನೂ ಓದಿ :

ಆಡಳಿತದಲ್ಲಿ ಈ ಕೃತಕಬುದ್ಧಿಮತ್ತೆ ಬಳಕೆ ಬಗ್ಗೆ ತೀರ್ಮಾನ ಮಾಡುವ ಮುನ್ನ ದೊಡ್ಡ ಸಂಶೋಧನೆ ಆಗಬೇಕು. ಸಂಶೋಧನೆಯಾಗದೇ ಈ ಬಗ್ಗೆ ತೀರ್ಮಾನ ಮಾಡುವುದು ಕಷ್ಟ. ಪರಿಷತ್ ಸಭಾಪತಿಗಳು ಸದನದ ಕಡತಗಳನ್ನು ಸ್ಕ್ಯಾನ್ ಮಾಡಿ ಕಂಪ್ಯೂಟರ್ ಗೆ ಹಾಕಿದರೆ ಅಲ್ಲವೇ ಡಿಜಿಟಲ್ ಆಗಿ ರೂಪುಗೊಳ್ಳುವುದು. ಅದೇ ರೀತಿ ಕೃತಕಬುದ್ಧಿಮತ್ತೆಯಲ್ಲಿ ಹೊಸದಾಗಿ ಏನನ್ನೂ ಸೃಷ್ಟಿ ಮಾಡಲು ಆಗುವುದಿಲ್ಲ. ನೀವು ಅದರಲ್ಲಿ ಏನು ಹಾಕುತ್ತೀರೋ ಅದೇ ಹೊರಗೆ ಬರುತ್ತದೆ. ಈ ವಿಚಾರವಾಗಿ ತೀರ್ಮಾನ ಮಾಡುವುದು ಕಷ್ಟ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ಕಾರ್ಯಕ್ರಮವೊಂದರ ಭಾಷಣ ವಿಚಾರವಾಗಿ ನನ್ನ ಪಿಎಗೆ ಕರೆ ಮಾಡಿ ಕೇಳುವಾಗ, ನೀವು ಅದನ್ನು ಯಾಕೆ ಕೇಳುತ್ತೀರಿ, ಚಾಟ್ ಜಿಪಿಟಿಯಲ್ಲಿ ಹಾಕಿ ಎಂದು ನನ್ನ ಮಗಳು ಹೇಳಿದಳು. ಆಗ ನನಗೆ ಸಾಕಷ್ಟು ಮಾಹಿತಿಗಳು ಸಿಕ್ಕವು. ನಾನು ಈ ರೀತಿ ಕೃತಕಬುದ್ಧಿಮತ್ತೆ ಬಳಕೆ ವಿಚಾರದಲ್ಲಿ ಸಾಕಷ್ಟು ಪ್ರಯೋಗ ಮಾಡಿದ್ದೇನೆ. ಆದರೆ, ನಿಖರತೆ ಇನ್ನಷ್ಟು ಸುಧಾರಿಸಬೇಕಾಗಿದೆ. ಈ ವಿಚಾರದ ಬಗ್ಗೆ ಸಭಾಪತಿಗಳೇ ಸಂಶೋಧನೆ ಮಾಡಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ :

ಸದನದಲ್ಲಿರುವ ದಾಖಲೆಗಳನ್ನು ಕಂಪ್ಯೂಟರ್‍ಗೆ ಅಪ್‍ಲೋಡ್ ಮಾಡದೇ ನಿಮಗೆ ಮಾಹಿತಿ ಸಿಗಲು ಹೇಗೆ ಸಾಧ್ಯ? ನ್ಯಾಯಾಲಯದಲ್ಲಿ ಈ ಹಿಂದೆ ಬಂದಿರುವ ತೀರ್ಪುಗಳನ್ನು ಅಪ್‍ಲೋಡ್ ಮಾಡಿದಾಗ ಮಾತ್ರ ಅದರಲ್ಲಿ ಮಾಹಿತಿ ಸಿಗುತ್ತದೆ. ಹಾಗೆಂದು ಅವುಗಳನ್ನೇ ಆಧರಿಸಿ ತೀರ್ಪು ಬರೆಯಲು ಆಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ನಾನು ಅಸ್ಸಾಂಗೆ ಹೋದಾಗ ಅಲ್ಲಿನ ಚುನಾವಣೆ ಗೆಲ್ಲುವುದು ಹೇಗೆ ಎಂದು ಎಐ ಕೇಳಿದೆ. ಅದು ಹೇಳಿದ್ದನ್ನೆಲ್ಲಾ ಇಟ್ಟುಕೊಂಡು ನಾವು ಚುನಾವಣೆ ಮಾಡಲು ಆಗುತ್ತಾ? ಬೇಕಾದರೆ ನೀವೂ ನನ್ನ ಜೊತೆ ಸದನದ ಹೊರಗೆ ಬನ್ನಿ ಎಐ ಹೇಳಿದ್ದನ್ನು ನಾನೇ ಮೊಬೈಲ್‍ನಲ್ಲಿ ತೋರಿಸುತ್ತೇನೆ ಎಂದ ಅವರು, ಈ ಮೂಲಕ ಅಸ್ಸಾಂ ಚುನಾವಣೆ ಗೆಲ್ಲಲು ಕರ್ನಾಟಕ ಮಾಡೆಲ್ ಅನುಸರಿಸಿ ಅಂತ ಎಐ ತೋರಿಸುತ್ತದೆ ಎಂದು ಡಿ.ಕೆ.ಶಿವಕುಮಾರ್ ವಿಪಕ್ಷ ಸದಸ್ಯರ ಕಾಲೆಳೆದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago