Featured

ಕರ್ನಾಟಕ ಮಾದರಿ ಅನುಸರಿಸಿ ಅಸ್ಸಾಂ ಚುನಾವಣೆ ಗೆಲ್ಲುತ್ತೀರಿ ಎಂದು AI ಹೇಳುತ್ತದೆ : ಬಿಜೆಪಿ ಕಾಲೆಳೆದ ಡಿಸಿಎಂ – vishwanews24

ಕರ್ನಾಟಕ ಮಾದರಿ ಬಳಸಿ ಅಸ್ಸಾಂ ಚುನಾವಣೆ ಗೆಲ್ಲಬಹುದೆಂದು AI ಹೇಳುತ್ತದೆ: ವಿಪಕ್ಷ ಸದಸ್ಯರ ಕಾಲೆಳೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಅಸ್ಸಾಂಗೆ ಹೋದಾಗ, ಅಲ್ಲಿನ ಚುನಾವಣೆ ಗೆಲ್ಲುವುದು ಹೇಗೆ ಎಂದು ಎಐ (ಕೃತಕ ಬುದ್ಧಿಮತ್ತೆ) ಮೂಲಕ ಪ್ರಶ್ನೆ ಕೇಳಿದೆ, ಅದಕ್ಕೆ ನೀವು ಕರ್ನಾಟಕ ಮಾದರಿ ಅನುಸರಿಸಿ ಅಸ್ಸಾಂ ಚುನಾವಣೆ ಗೆಲ್ಲುತ್ತೀರಿ ಎಂದು ಎಐ ಹೇಳುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸದಸ್ಯರ ಕಾಲೆಳೆದರು.

ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ, ರಾಜ್ಯದಲ್ಲಿ ಆಡಳಿತ ಸುಧಾರಣೆ ಕುರಿತು ಎಐ(ಕೃತಕ ಬುದ್ಧಿಮತ್ತೆ) ಬಳಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಈಗ ನಾವೆಲ್ಲರೂ ಎಐ ಹೊಸಯುಗಕ್ಕೆ ಕಾಲಿಡುತ್ತಿದ್ದೇವೆ. ಈ ಬಗ್ಗೆ ಪ್ರಪಂಚದೆಲ್ಲೆಡೆ ಚರ್ಚೆಯಾಗುತ್ತಿದ್ದು, ಪ್ರಧಾನಮಂತ್ರಿಗಳು ಈ ವಿಚಾರವಾಗಿ ದೊಡ್ಡ ಸಮ್ಮೇಳನ ನಡೆಸಿದರು. ನ್ಯಾಯಾಲಯಗಳಲ್ಲಿ ಇದರ ಬಳಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಿಬಿಎಸ್ಸಿ ಪಠ್ಯಕ್ರಮದಲ್ಲಿ 3ರಿಂದ 8ನೇ ತರಗತಿವರೆಗೆ ಈ ವಿಚಾರವನ್ನು ಪಠ್ಯದಲ್ಲಿ ಸೇರಿಸಲು ತಿಳಿಸಲಾಗಿದೆ ಎಂದರು.

ಇದನ್ನೂ ಓದಿ :

ಆಡಳಿತದಲ್ಲಿ ಈ ಕೃತಕಬುದ್ಧಿಮತ್ತೆ ಬಳಕೆ ಬಗ್ಗೆ ತೀರ್ಮಾನ ಮಾಡುವ ಮುನ್ನ ದೊಡ್ಡ ಸಂಶೋಧನೆ ಆಗಬೇಕು. ಸಂಶೋಧನೆಯಾಗದೇ ಈ ಬಗ್ಗೆ ತೀರ್ಮಾನ ಮಾಡುವುದು ಕಷ್ಟ. ಪರಿಷತ್ ಸಭಾಪತಿಗಳು ಸದನದ ಕಡತಗಳನ್ನು ಸ್ಕ್ಯಾನ್ ಮಾಡಿ ಕಂಪ್ಯೂಟರ್ ಗೆ ಹಾಕಿದರೆ ಅಲ್ಲವೇ ಡಿಜಿಟಲ್ ಆಗಿ ರೂಪುಗೊಳ್ಳುವುದು. ಅದೇ ರೀತಿ ಕೃತಕಬುದ್ಧಿಮತ್ತೆಯಲ್ಲಿ ಹೊಸದಾಗಿ ಏನನ್ನೂ ಸೃಷ್ಟಿ ಮಾಡಲು ಆಗುವುದಿಲ್ಲ. ನೀವು ಅದರಲ್ಲಿ ಏನು ಹಾಕುತ್ತೀರೋ ಅದೇ ಹೊರಗೆ ಬರುತ್ತದೆ. ಈ ವಿಚಾರವಾಗಿ ತೀರ್ಮಾನ ಮಾಡುವುದು ಕಷ್ಟ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ಕಾರ್ಯಕ್ರಮವೊಂದರ ಭಾಷಣ ವಿಚಾರವಾಗಿ ನನ್ನ ಪಿಎಗೆ ಕರೆ ಮಾಡಿ ಕೇಳುವಾಗ, ನೀವು ಅದನ್ನು ಯಾಕೆ ಕೇಳುತ್ತೀರಿ, ಚಾಟ್ ಜಿಪಿಟಿಯಲ್ಲಿ ಹಾಕಿ ಎಂದು ನನ್ನ ಮಗಳು ಹೇಳಿದಳು. ಆಗ ನನಗೆ ಸಾಕಷ್ಟು ಮಾಹಿತಿಗಳು ಸಿಕ್ಕವು. ನಾನು ಈ ರೀತಿ ಕೃತಕಬುದ್ಧಿಮತ್ತೆ ಬಳಕೆ ವಿಚಾರದಲ್ಲಿ ಸಾಕಷ್ಟು ಪ್ರಯೋಗ ಮಾಡಿದ್ದೇನೆ. ಆದರೆ, ನಿಖರತೆ ಇನ್ನಷ್ಟು ಸುಧಾರಿಸಬೇಕಾಗಿದೆ. ಈ ವಿಚಾರದ ಬಗ್ಗೆ ಸಭಾಪತಿಗಳೇ ಸಂಶೋಧನೆ ಮಾಡಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ :

ಸದನದಲ್ಲಿರುವ ದಾಖಲೆಗಳನ್ನು ಕಂಪ್ಯೂಟರ್‍ಗೆ ಅಪ್‍ಲೋಡ್ ಮಾಡದೇ ನಿಮಗೆ ಮಾಹಿತಿ ಸಿಗಲು ಹೇಗೆ ಸಾಧ್ಯ? ನ್ಯಾಯಾಲಯದಲ್ಲಿ ಈ ಹಿಂದೆ ಬಂದಿರುವ ತೀರ್ಪುಗಳನ್ನು ಅಪ್‍ಲೋಡ್ ಮಾಡಿದಾಗ ಮಾತ್ರ ಅದರಲ್ಲಿ ಮಾಹಿತಿ ಸಿಗುತ್ತದೆ. ಹಾಗೆಂದು ಅವುಗಳನ್ನೇ ಆಧರಿಸಿ ತೀರ್ಪು ಬರೆಯಲು ಆಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ನಾನು ಅಸ್ಸಾಂಗೆ ಹೋದಾಗ ಅಲ್ಲಿನ ಚುನಾವಣೆ ಗೆಲ್ಲುವುದು ಹೇಗೆ ಎಂದು ಎಐ ಕೇಳಿದೆ. ಅದು ಹೇಳಿದ್ದನ್ನೆಲ್ಲಾ ಇಟ್ಟುಕೊಂಡು ನಾವು ಚುನಾವಣೆ ಮಾಡಲು ಆಗುತ್ತಾ? ಬೇಕಾದರೆ ನೀವೂ ನನ್ನ ಜೊತೆ ಸದನದ ಹೊರಗೆ ಬನ್ನಿ ಎಐ ಹೇಳಿದ್ದನ್ನು ನಾನೇ ಮೊಬೈಲ್‍ನಲ್ಲಿ ತೋರಿಸುತ್ತೇನೆ ಎಂದ ಅವರು, ಈ ಮೂಲಕ ಅಸ್ಸಾಂ ಚುನಾವಣೆ ಗೆಲ್ಲಲು ಕರ್ನಾಟಕ ಮಾಡೆಲ್ ಅನುಸರಿಸಿ ಅಂತ ಎಐ ತೋರಿಸುತ್ತದೆ ಎಂದು ಡಿ.ಕೆ.ಶಿವಕುಮಾರ್ ವಿಪಕ್ಷ ಸದಸ್ಯರ ಕಾಲೆಳೆದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

13 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

13 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

17 hours ago