ಹೈದರಾಬಾದ್: ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ ಗಾಂಧಿ, 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಾಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ 2,500 ಹಾಗೂ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಫ್ರೀ ಬಸ್, ಕ್ವಿಂಟಾಲ್ ಭತಕ್ಕೆ 500 ಬೋನಸ್, 200 ಯೂನಿಟ್ ಫ್ರೀ ಕರೆಂಟ್, ಮನೆ ಇಲ್ಲದವರಿಗೆ ಇಂದಿರಮ್ಮ ಗೃಹ ಯೋಜನೆ ಸೇರಿದಂತೆ ಹಲವು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:
ತುಕ್ಕುಗೂಡದ ‘ವಿಜಯಭೇರಿ’ ಸಾರ್ವಜನಿಕ ಸಭೆಯಲ್ಲಿ ಭಾನುವಾರ ತೆಲಂಗಾಣಕ್ಕೆ ಆರು ಗ್ಯಾರಂಟಿಗಳನ್ನು ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ತಕ್ಷಣ ಯೋಜನೆಗಳು ಜಾರಿಯಾಗಲಿವೆ ಎಂದು ಭರವಸೆ ನೀಡಿದ್ದಾರೆ.
ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ರಾಜ್ಯದಲ್ಲಿ ಗೆಲುವಿಗೆ ಕಾರಣವಾಗಿದ್ದ ಗ್ಯಾರಂಟಿಗಳ ಸೂತ್ರವನ್ನು ತೆಲಂಗಾಣದಲ್ಲೂ ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ.
ಇದನ್ನೂ ಓದಿ:
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…