ಉಡುಪಿ:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೂಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎನ್ನುವ ಆಫ್ ಬಿಡುಗಡೆ ಮಾಡಿದ್ದೇವೆ. ಈ ಒಂದು ಆ್ಯಪ್ ನಲ್ಲಿ ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್ಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿರುದ್ಯೋಗಿಗಳ ಸರ್ವೇಯನ್ನು ಮಾಡುತ್ತಿದ್ದೇವೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಎಷ್ಟು ನಿರುದ್ಯೋಗಿಗಳಿದ್ದಾರೆ ಎನ್ನುವ ಸಂಖ್ಯೆಯನ್ನು ಹುಡುಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ಬಗ್ಗೆ ವಿವರ ನೀಡಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಯಾವ ರೀತಿ ಉದ್ಯೋಗ ಸೃಷ್ಟಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಬೇಕು. ಎಂದು ನಮ್ಮ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವಿ ಅವರು ಹೇಳಿದರು.
ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಸರ್ವೆ ಕಾರ್ಯ ನಡೆಯಲಿದೆ -ಸರ್ವೆಯಲ್ಲಿ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಡೇಟಾ ಸಮೇತವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಿಳಿಯಪಡಿಸಿ ಉದ್ಯೋಗ ಸೃಷ್ಟಿಗೆ ಒತ್ತು ಹಾಕಲಾಗುವುದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಭವ್ಯ ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ,ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್,ಮೊದಲಾದವರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…