Featured

ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ : ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ – Vishwanews24

ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ – Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.

ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು ನಾನು ಕರ್ನಾಟಕಕ್ಕೆ ಹೋಗುತ್ತಿರುವೆ ಎಂದಿದ್ದಾರೆ. ‘ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು’ ಎಂದಿದ್ದಾರೆ.

‘ಸೋಮವಾರ ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದೇನೆ. 150 ಟೆಕ್ ಹಬ್‌ಗಳ ಲೋಕಾರ್ಪಣೆ ಕೂಡ ಮಾಡುವೆ’ ಎಂದಿದ್ದಾರೆ.

 

‘ಬೆಂಗಳೂರಿನ ಕಾರ್ಯಕ್ರಮದಲ್ಲಿ, ₹27,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದ್ದಾರೆ.

 

 

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

23 minutes ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

30 minutes ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

39 minutes ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

45 minutes ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

58 minutes ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

1 hour ago