ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.
ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು ನಾನು ಕರ್ನಾಟಕಕ್ಕೆ ಹೋಗುತ್ತಿರುವೆ ಎಂದಿದ್ದಾರೆ. ‘ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು’ ಎಂದಿದ್ದಾರೆ.
‘ಸೋಮವಾರ ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದೇನೆ. 150 ಟೆಕ್ ಹಬ್ಗಳ ಲೋಕಾರ್ಪಣೆ ಕೂಡ ಮಾಡುವೆ’ ಎಂದಿದ್ದಾರೆ.
‘ಬೆಂಗಳೂರಿನ ಕಾರ್ಯಕ್ರಮದಲ್ಲಿ, ₹27,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದ್ದಾರೆ.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…