ಮೂಲ್ಕಿ : ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಸೇರ್ಪಡೆಯಾಗಿದ್ದು ಭಕ್ತರ ಹರ್ಷಕ್ಕೆ ಕಾರಣವಾಗಿದೆ.
ರಾಜ್ಯ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಪ್ರವಾಸಿ ತಾಣಗಳ ಪಟ್ಟಿಗೆ ಬಪ್ಪನಾಡು ದೇವಸ್ಥಾನವನ್ನು ಸೇರ್ಪಡೆಗೊಳಿಸಬೇಕೆಂದು ಭಕ್ತರ ಪರವಾಗಿ ಜೀವನ್ ಕೆ. ಶೆಟ್ಟಿ ಅವರು ಸರಕಾರಕ್ಕೆ ಮನವಿ ಮಾಡಿದ್ದರು.
ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೀಶ್ವರ್, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು, ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಹಿಂದಿನ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರಿಗೆ ಮನವಿ ಮಾಡಲಾಗಿತ್ತು.
ಸಸಿಹಿತ್ಲು ಬೀಚ್- ಭಗವತಿ ಕ್ಷೇತ್ರ-ಉಮಾಮಹೇಶ್ವರಿ ದೇವಸ್ಥಾನ(ಹೊಯ್ಗೆಗುಡ್ಡೆ)-ಚಿತ್ರಾಪು- ಕಲ್ಲಸಂಕ-ಪಡುಬೈಲು ಕೋರ್ದಬ್ಬು ದೈವಸ್ಥಾನ- ಕೊಳಚಿಕಂಬಳ ಮಂತ್ರ ಸರ್ಫಿಂಗ್ -ಬಪ್ಪನಾಡು ದೇವಸ್ಥಾನ ಇದನ್ನು ಟೂರಿಸಂ ಕಾರಿಡಾರ್ ಆಗಿ ಪರಿಗಣಿಸಿ ಅಭಿವೃದ್ಧಿಪಡಿಸಿದ್ದಲ್ಲಿ ಮುಲ್ಕಿ ತಾಲೂಕಿನಲ್ಲಿ ಪರಿಸರಸ್ನೇಹಿ ಪ್ರವಾಸೋದ್ಯಮವನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವರಿಗೆ ವಿವರಿಸಲಾಗಿತ್ತು.
ಬಪ್ಪ ಬ್ಯಾರಿಗೆ ದೇವಿ ಅನುಗ್ರಹ ನೀಡಿ ನೆಲೆನಿಂತಿರುವ ಕಾರಣಿಕ ತಾಣವಾದ ಬಪ್ಪನಾಡು ದೇವಸ್ಥಾನಕ್ಕೆ ಪ್ರತಿನಿತ್ಯ ಅಸಂಖ್ಯ ಭಕ್ತರು ಆಗಮಿಸುತ್ತಾರೆ. ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ ನಲ್ಲಿ ದೇವಸ್ಥಾನದ ಅಧಿಕೃತ ಮಾಹಿತಿ ಇಲ್ಲದೇ ಇರುವುದು ಹೊರಗಿನಿಂದ ಬರುವ ಭಕ್ತರಿಗೆ ಸಮಸ್ಯೆಯಾಗುತ್ತಿತ್ತು. ಈ ಬಗ್ಗೆ ಸ್ಪಂದಿಸಿದ ಸರಕಾರ ದೇವಸ್ಥಾನವನ್ನು ರಾಜ್ಯ ಪ್ರವಾಸಿ ತಾಣಗಳ ಪಟ್ಟಿಗೆ ಸೇರಿಸಿ ಸುತ್ತೋಲೆ ಹೊರಡಿಸಿದೆ. ಇದು ಕ್ಷೇತ್ರದ ಭಕ್ತರಿಗೆ ಖುಷಿಯ ವಿಚಾರ, ನಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ಧನ್ಯವಾದಗಳು ಎಂದು ಜೀವನ್ ಕೆ. ಶೆಟ್ಟಿ ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…