ಉಡುಪಿ: ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸಲು ದಿಟ್ಟ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ಪಣತೊಟ್ಟಿದೆ ಎಂದು ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ರಾಜ್ಯದಲ್ಲಿ ಭದ್ರವಾಗಿ ನೆಲೆಯೂರಿದ್ದ ಡ್ರಗ್ಸ್ ಜಾಲದ ಬಗ್ಗೆ ಸಿಸಿಬಿ ಉನ್ನತ ಮಟ್ಟದ ತನಿಖೆ ನಡೆಸಿ ಚಿತ್ರೋದ್ಯಮದ ನಟ ನಟಿಯರು, ಉದ್ಯಮಿಗಳು, ಡ್ರಗ್ ಪೆಡ್ಲರ್ಗಳನ್ನು ಬಂಧಿಸುವ ಮೂಲಕ ದಂಧೆಕೋರರಲ್ಲಿ ನಡುಕ ಹುಟ್ಟಿಸಿದೆ.
ರಾಜ್ಯದ ಕರಾವಳಿ ಭಾಗಗಳಾದ ಭಟ್ಕಳ, ಕಾಸರಗೋಡು ಭಾಗಗಳಲ್ಲಿಯೂ ಡ್ರಗ್ಸ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು ಕೆಲವು ಮತಾಂಧ ಸಂಘಟನೆಗಳು ಅಮಾಯಕ ಯುವಕರನ್ನು ಆಮಿಷಕ್ಕೊಳಪಡಿಸಿ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಲು ಪ್ರೇರೇಪಿಸುತ್ತಿದೆ.
ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ಪುತ್ರ ಬೆಲ್ಜಿಯಂ ದೇಶದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಸಂದರ್ಭದಲ್ಲೂ ಡ್ರಗ್ಸ್ ಸೇವನೆ ಬಗ್ಗೆ ಸಂಶಯ ವ್ಯಕ್ತವಾದಾಗ ಯಾವುದೇ ತನಿಖೆ ನಡೆಸದೇ ಮುಚ್ಚಿಹಾಕುವ ಮೂಲಕ ಪರೋಕ್ಷವಾಗಿ ಡ್ರಗ್ಸ್ ಮಾಫಿಯಾಕ್ಕೆ ಶರಣಾಗಿತ್ತು.
ದೇಶ ವಿರೋಧಿ, ಅಪರಾಧ ಚಟುವಟಿಕೆಗಳಿಗೆ ಪ್ರೇರೇಪಿಸುವ ಡ್ರಗ್ಸ್ ಜಾಲದ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ರವರು ಹಾಗೂ ಜಿಲ್ಲೆಯ ಎಲ್ಲಾ ಸಂಸದರು, ಶಾಸಕರು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಆದೇಶ ನೀಡಿದ್ದಾರೆ.
ಶಿಕ್ಷಣ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರಮುಖ ವಹಿಸಿರುವ ರಾಜ್ಯದ ಕರಾವಳಿ ಜಿಲ್ಲೆಗಳ ವಿದ್ಯಾರ್ಥಿಗಳು, ಯುವ ಜನತೆಯನ್ನು ಹಾದಿ ತಪ್ಪಿಸುವ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಕರಾವಳಿ ಜಿಲ್ಲೆಗಳಿಗೂ ತನಿಖೆಯನ್ನು ವಿಸ್ತರಿಸಿ ಡ್ರಗ್ಸ್ ಮುಕ್ತವಾಗಿಸುವಂತೆ ಮನವಿ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…