Featured

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣರರ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಿದ ಬಿಜೆಪಿ ಮುಖಂಡ ಶ್ರೀಶ ನಾಯಕ್ ಮತ್ತು ತಂಡ:vishwanews24

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣರರ ಮನೆಗೆ

ಭೇಟಿ ನೀಡಿ ಗೌರವ ಸಲ್ಲಿಸಿದ ಬಿಜೆಪಿ ಮುಖಂಡ ಶ್ರೀಶ ನಾಯಕ್ ಮತ್ತು

ತಂಡ:vishwanews24

ಕಾಪು: ೨೦೨೨ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವನರ್ತಕ ಗುಡ್ಡ ಪಾಣರ ಅವರ ಮನೆಗೆ ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಮತ್ತು ತಂಡ ಭೇಟಿ ನೀಡಿ ಗೌರವ ಸಲ್ಲಿಸಿದರು.


ಸುಮಾರು ೪೮ ವರ್ಷಗಳಿಂದ ಕರಾವಳಿ ಭಾಗದಲ್ಲಿ ವಿವಿಧ ದೈವಗಳ ಸೇವೆ ಸಲ್ಲಿಸುತ್ತಿರುವ ಪಾಣರ ಇವರು ಕಳೆದ ೩೮ ವರ್ಷಗಳಿಂದ ಕಾಪು ಗುರು ಬ್ರಹ್ಮ ಮುರ್ಗೆಕಲ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ “ಪಿಲಿಕೋಲ” ದ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.


ಪ್ರಶಸ್ತಿಗೆ ಅರ್ಜಿ ಹಾಕದೇ ರಾಜ್ಯದ ಮಹೋನ್ನತ ಪ್ರಶಸ್ತಿಗೆ ಭಾಜನರಾಗಿರುವ ಗುಡ್ಡ ಪಾಣರ ಅವರ ಮನೆಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಶ್ರೀಶ ನಾಯಕ್ ಹಾರ-ತುರಾಯಿಗಳೊಂದಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ಆರ್ಶಿವಾದ ಪಡೆದುಕೊಂಡರು.


ತದನAತರ ಮಾಧ್ಯಮದ ಜತೆ ಮಾತನಾಡಿದ ಅವರು”ನವ ಭಾರತದಲ್ಲಿ ಪ್ರಶಸ್ತಿಗಳ ಹಿಂದೆ ಹೋಗುವ ಕಾಲ ಕಳೆದು ಹೋಗಿದೆ ಈಗ ಏನಿದ್ದರು ಅರ್ಹರ ಮನೆಗೆ ಪ್ರಶಸ್ತಿ ಹುಡುಕಿಕೊಂಡು ಬರುತ್ತಿದೆ ಅಂತಹದೇ ಕೆಲಸ ಇಂದು ರಾಜ್ಯ ಸರ್ಕಾರ ಮಾಡಿದೆ. ತುಳುನಾಡು ಎಂಬುದು ದೈವ ದೇವರ ನೆಲೆಬೀಡು ಅಂತಹ ಪುಣ್ಯದ ಮಣ್ಣಿನಲ್ಲಿ ಹುಟ್ಟಿ ಬೆಳೆದು ನಿರಂತರ ೪೮ ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ಹರಸಿ ಬಂದಿರುವುದು ಹರ್ಷ ತಂದಿದೆ ಎಂದರು.


ಈ ಸಂಧರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚದ ಅಧ್ಯಕ್ಷ ದಾವೂದ್ ಅಬೂಬ್ಬಕ್ಕರ್, ಅನಿಲ್ ಶೆಟ್ಟಿ ಮಾಂಬೆಟ್ಟು, ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ನವೀನ್ ಎಸ್.ಕೆ, ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago