ಕಾಪು: ೨೦೨೨ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವನರ್ತಕ ಗುಡ್ಡ ಪಾಣರ ಅವರ ಮನೆಗೆ ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಮತ್ತು ತಂಡ ಭೇಟಿ ನೀಡಿ ಗೌರವ ಸಲ್ಲಿಸಿದರು.
ಸುಮಾರು ೪೮ ವರ್ಷಗಳಿಂದ ಕರಾವಳಿ ಭಾಗದಲ್ಲಿ ವಿವಿಧ ದೈವಗಳ ಸೇವೆ ಸಲ್ಲಿಸುತ್ತಿರುವ ಪಾಣರ ಇವರು ಕಳೆದ ೩೮ ವರ್ಷಗಳಿಂದ ಕಾಪು ಗುರು ಬ್ರಹ್ಮ ಮುರ್ಗೆಕಲ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ “ಪಿಲಿಕೋಲ” ದ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಪ್ರಶಸ್ತಿಗೆ ಅರ್ಜಿ ಹಾಕದೇ ರಾಜ್ಯದ ಮಹೋನ್ನತ ಪ್ರಶಸ್ತಿಗೆ ಭಾಜನರಾಗಿರುವ ಗುಡ್ಡ ಪಾಣರ ಅವರ ಮನೆಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಶ್ರೀಶ ನಾಯಕ್ ಹಾರ-ತುರಾಯಿಗಳೊಂದಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ಆರ್ಶಿವಾದ ಪಡೆದುಕೊಂಡರು.
ತದನAತರ ಮಾಧ್ಯಮದ ಜತೆ ಮಾತನಾಡಿದ ಅವರು”ನವ ಭಾರತದಲ್ಲಿ ಪ್ರಶಸ್ತಿಗಳ ಹಿಂದೆ ಹೋಗುವ ಕಾಲ ಕಳೆದು ಹೋಗಿದೆ ಈಗ ಏನಿದ್ದರು ಅರ್ಹರ ಮನೆಗೆ ಪ್ರಶಸ್ತಿ ಹುಡುಕಿಕೊಂಡು ಬರುತ್ತಿದೆ ಅಂತಹದೇ ಕೆಲಸ ಇಂದು ರಾಜ್ಯ ಸರ್ಕಾರ ಮಾಡಿದೆ. ತುಳುನಾಡು ಎಂಬುದು ದೈವ ದೇವರ ನೆಲೆಬೀಡು ಅಂತಹ ಪುಣ್ಯದ ಮಣ್ಣಿನಲ್ಲಿ ಹುಟ್ಟಿ ಬೆಳೆದು ನಿರಂತರ ೪೮ ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ಹರಸಿ ಬಂದಿರುವುದು ಹರ್ಷ ತಂದಿದೆ ಎಂದರು.
ಈ ಸಂಧರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚದ ಅಧ್ಯಕ್ಷ ದಾವೂದ್ ಅಬೂಬ್ಬಕ್ಕರ್, ಅನಿಲ್ ಶೆಟ್ಟಿ ಮಾಂಬೆಟ್ಟು, ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ನವೀನ್ ಎಸ್.ಕೆ, ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…