ಕಾಪು: ೨೦೨೨ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವನರ್ತಕ ಗುಡ್ಡ ಪಾಣರ ಅವರ ಮನೆಗೆ ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಮತ್ತು ತಂಡ ಭೇಟಿ ನೀಡಿ ಗೌರವ ಸಲ್ಲಿಸಿದರು.
ಸುಮಾರು ೪೮ ವರ್ಷಗಳಿಂದ ಕರಾವಳಿ ಭಾಗದಲ್ಲಿ ವಿವಿಧ ದೈವಗಳ ಸೇವೆ ಸಲ್ಲಿಸುತ್ತಿರುವ ಪಾಣರ ಇವರು ಕಳೆದ ೩೮ ವರ್ಷಗಳಿಂದ ಕಾಪು ಗುರು ಬ್ರಹ್ಮ ಮುರ್ಗೆಕಲ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ “ಪಿಲಿಕೋಲ” ದ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಪ್ರಶಸ್ತಿಗೆ ಅರ್ಜಿ ಹಾಕದೇ ರಾಜ್ಯದ ಮಹೋನ್ನತ ಪ್ರಶಸ್ತಿಗೆ ಭಾಜನರಾಗಿರುವ ಗುಡ್ಡ ಪಾಣರ ಅವರ ಮನೆಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಶ್ರೀಶ ನಾಯಕ್ ಹಾರ-ತುರಾಯಿಗಳೊಂದಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ಆರ್ಶಿವಾದ ಪಡೆದುಕೊಂಡರು.
ತದನAತರ ಮಾಧ್ಯಮದ ಜತೆ ಮಾತನಾಡಿದ ಅವರು”ನವ ಭಾರತದಲ್ಲಿ ಪ್ರಶಸ್ತಿಗಳ ಹಿಂದೆ ಹೋಗುವ ಕಾಲ ಕಳೆದು ಹೋಗಿದೆ ಈಗ ಏನಿದ್ದರು ಅರ್ಹರ ಮನೆಗೆ ಪ್ರಶಸ್ತಿ ಹುಡುಕಿಕೊಂಡು ಬರುತ್ತಿದೆ ಅಂತಹದೇ ಕೆಲಸ ಇಂದು ರಾಜ್ಯ ಸರ್ಕಾರ ಮಾಡಿದೆ. ತುಳುನಾಡು ಎಂಬುದು ದೈವ ದೇವರ ನೆಲೆಬೀಡು ಅಂತಹ ಪುಣ್ಯದ ಮಣ್ಣಿನಲ್ಲಿ ಹುಟ್ಟಿ ಬೆಳೆದು ನಿರಂತರ ೪೮ ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ಹರಸಿ ಬಂದಿರುವುದು ಹರ್ಷ ತಂದಿದೆ ಎಂದರು.
ಈ ಸಂಧರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚದ ಅಧ್ಯಕ್ಷ ದಾವೂದ್ ಅಬೂಬ್ಬಕ್ಕರ್, ಅನಿಲ್ ಶೆಟ್ಟಿ ಮಾಂಬೆಟ್ಟು, ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ನವೀನ್ ಎಸ್.ಕೆ, ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…