ಉತ್ತಮ ಸಂಘಟಕರಾಗಿ ಸಾಮಾಜಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ರವರು ಪ್ರಸಕ್ತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾ ಕೂಟಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಠಾಕೂರ್ ರವರು ಇದೀಗ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಪದೋನ್ನತಿ ಹೊಂದಿರುವುದು ಅಭಿನಂದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿಯಲ್ಲಿ ನಡೆದ 3 ಜಿಲ್ಲೆಗಳ ಕ್ರೀಡಾ ಕೂಟದ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಮಟ್ಟದ ಹಿರಿಯರ ಕ್ರೀಡಾ ಕೂಟದ ಕಾರ್ಯದರ್ಶಿಯಾಗಿ, ರಾಜ್ಯ ಮಟ್ಟದ ಕಿರಿಯರ ಕ್ರೀಡಾ ಕೂಟ, ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾ ಕೂಟ, 23ರ ವಯೋಮಿತಿಯ ಪುರುಷರ ಮತ್ತು ಮಹಿಳೆಯರ ಕ್ರೀಡಾ ಕೂಟ ಹಾಗೂ 20 ಮತ್ತು 23ರ ವಯೋಮಿತಿಯ ಅಥ್ಲೆಟಿಕ್ ಚಾಂಪಿಯನ್ಶಿಪ್ ನ್ನು ಯಶಸ್ವಿಯಾಗಿ ನಿರ್ವಹಿಸಿ ಸೈ ಎನಿಸಿಕೊಂಡಿರುವ ಮಹೇಶ್ ಠಾಕೂರ್ ರವರ ಮುಂದಿನ ಕಾರ್ಯ ಯೋಜನೆಗಳು ಫಲಪ್ರದವಾಗುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಇನ್ನಷ್ಟು ಅತ್ಯಮೂಲ್ಯ ಸೇವೆ ದೊರಕುವಂತಾಗಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…