ಉಡುಪಿ : ಕರ್ನಾಟಕದ ಪರಂಪರೆಯ ಕ್ರೀಡೆಯಾದ ಕಂಬಳ ಈಗ ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಸಂಸ್ಥೆಯಾಗಿ ಹೊಸ ಆಯಾಮವನ್ನು ಪಡೆದಿದೆ.
ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಇದೀಗ ಅಧಿಕೃತವಾಗಿ ರಚನೆಯಾಗಿದ್ದು, ರಾಜ್ಯ ಕ್ರೀಡಾ ಸಂಸ್ಥೆಯಾಗಿ ಸರ್ಕಾರದಿಂದ ಮಾನ್ಯತೆ ಪಡೆದಿದೆ. ಈ ಅಸೋಸಿಯೇಷನ್ನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಗಿದೆ.
ಹೊಸ ಅಸೋಸಿಯೇಷನ್ನಲ್ಲಿ ಮೂವರು ಗೌರವ ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 21 ಸದಸ್ಯರ ಸಮಿತಿ ಆಯ್ಕೆಗೊಂಡಿದ್ದು, ಇದರಲ್ಲಿ 13 ಮಂದಿ ಪ್ರಮುಖ ಸದಸ್ಯರು ಇರಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಕಂಬಳ ಕ್ರೀಡೆಗೆ ಸರಕಾರದಿಂದ ಪ್ರತಿವರ್ಷ ವಿಶೇಷ ಅನುದಾನ ನೀಡುವ ನಿರ್ಧಾರವೂ ಕೈಗೊಳ್ಳಲಾಗಿದೆ. ಇದರಿಂದ ಕಂಬಳದ ಪರಂಪರೆ, ಕ್ರೀಡಾತ್ಮಕತೆ ಹಾಗೂ ರೈತ ಸಮುದಾಯದ ಹೆಮ್ಮೆ ಮತ್ತಷ್ಟು ಬಲ ಪಡೆಯಲಿದೆ ಎಂದು ಅಸೋಸಿಯೇಷನ್ ಸದಸ್ಯರು ತಿಳಿಸಿದ್ದಾರೆ.
ಈ ಹೊಸ ಅಸೋಸಿಯೇಷನ್ ಮೂಲಕ ಕಂಬಳ ಕ್ರೀಡೆಯ ಸಂಘಟನೆ, ನಿರ್ವಹಣೆ ಹಾಗೂ ಪ್ರಚಾರ ಕಾರ್ಯಗಳು ರಾಜ್ಯದಾದ್ಯಂತ ಸಮನ್ವಯವಾಗಿ ನಡೆಯಲಿವೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…