ಉಡುಪಿ : ಕರ್ನಾಟಕದ ಪರಂಪರೆಯ ಕ್ರೀಡೆಯಾದ ಕಂಬಳ ಈಗ ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಸಂಸ್ಥೆಯಾಗಿ ಹೊಸ ಆಯಾಮವನ್ನು ಪಡೆದಿದೆ.
ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಇದೀಗ ಅಧಿಕೃತವಾಗಿ ರಚನೆಯಾಗಿದ್ದು, ರಾಜ್ಯ ಕ್ರೀಡಾ ಸಂಸ್ಥೆಯಾಗಿ ಸರ್ಕಾರದಿಂದ ಮಾನ್ಯತೆ ಪಡೆದಿದೆ. ಈ ಅಸೋಸಿಯೇಷನ್ನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಗಿದೆ.
ಹೊಸ ಅಸೋಸಿಯೇಷನ್ನಲ್ಲಿ ಮೂವರು ಗೌರವ ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 21 ಸದಸ್ಯರ ಸಮಿತಿ ಆಯ್ಕೆಗೊಂಡಿದ್ದು, ಇದರಲ್ಲಿ 13 ಮಂದಿ ಪ್ರಮುಖ ಸದಸ್ಯರು ಇರಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಕಂಬಳ ಕ್ರೀಡೆಗೆ ಸರಕಾರದಿಂದ ಪ್ರತಿವರ್ಷ ವಿಶೇಷ ಅನುದಾನ ನೀಡುವ ನಿರ್ಧಾರವೂ ಕೈಗೊಳ್ಳಲಾಗಿದೆ. ಇದರಿಂದ ಕಂಬಳದ ಪರಂಪರೆ, ಕ್ರೀಡಾತ್ಮಕತೆ ಹಾಗೂ ರೈತ ಸಮುದಾಯದ ಹೆಮ್ಮೆ ಮತ್ತಷ್ಟು ಬಲ ಪಡೆಯಲಿದೆ ಎಂದು ಅಸೋಸಿಯೇಷನ್ ಸದಸ್ಯರು ತಿಳಿಸಿದ್ದಾರೆ.
ಈ ಹೊಸ ಅಸೋಸಿಯೇಷನ್ ಮೂಲಕ ಕಂಬಳ ಕ್ರೀಡೆಯ ಸಂಘಟನೆ, ನಿರ್ವಹಣೆ ಹಾಗೂ ಪ್ರಚಾರ ಕಾರ್ಯಗಳು ರಾಜ್ಯದಾದ್ಯಂತ ಸಮನ್ವಯವಾಗಿ ನಡೆಯಲಿವೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…