ಮಂಗಳೂರು : ಉಡುಪಿ ಮೂಲದ ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ದೊರೆತಿದೆ. ಈ ಮಾನ್ಯತೆಯು ಕಂಬಳ ಸ್ಪರ್ಧೆಗಳನ್ನು ರಾಜ್ಯಾದ್ಯಂತ ನಡೆಸಲು ಮತ್ತು ಮೇಲ್ವಿಚಾರಣೆ ಮಾಡಲು ಸಂಘಕ್ಕೆ ಅಧಿಕಾರ ನೀಡುತ್ತದೆ, ಜೊತೆಗೆ ವಾರ್ಷಿಕ ಸರ್ಕಾರಿ ಅನುದಾನ ಪಡೆಯಲು ದಾರಿ ಮಾಡಿಕೊಟ್ಟಿದೆ. ಕಂಬಳವನ್ನು ರಾಜ್ಯ ಕ್ರೀಡಾ ಬಜೆಟ್ನಲ್ಲಿ ಸೇರಿಸಲಾಗುವುದು ಮತ್ತು ಮುಖ್ಯವಾಹಿನಿಯ ಕ್ರೀಡೆಗಳ ಸೌಲಭ್ಯಗಳು ದೊರೆಯಲಿವೆ.
ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ಈ ಮಾನ್ಯತೆಯು ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಆರ್. ಅವರು ಈ ಆದೇಶದಲ್ಲಿ ತಿಳಿಸಿದ್ದಾರೆ.
ಕಂಬಳ ಕ್ರೀಡೆಯನ್ನು ಸಂಘಟಿಸುವ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ಗೆ ಮಾನ್ಯತೆ ನೀಡುವಂತೆ ಕೋರಿ ಸಂಸ್ಥೆಯ ಅಧ್ಯಕ್ಷರು ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಸೋಸಿಯೇಷನ್ಗೆ ಮಾನ್ಯತೆ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 2025ರ ಮೇ 5ರಂದು ನಡೆದ ಸಭೆಯಲ್ಲಿ ರಾಜ್ಯದ ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಹಾಗೂ ಕಂಬಳ ಕ್ರೀಡೆಯ ವಿಶೇಷತೆಯನ್ನು ಪರಿಗಣಿಸಿ ಅದಕ್ಕೆ ಮಾನ್ಯತೆ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು.
ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷರಾಗಿರುವ ಈ ಅಸೋಷಿಯೇಷನ್ನಲ್ಲಿ 18 ಮಂದಿ ಪದಾಧಿಕಾರಿಗಳಿದ್ದಾರೆ. ಜೀವಂಧರ್ ಬಲ್ಲಾಳ್, ಜೀವನದಾಸ ಅಡ್ಯಂತಾಯ ಹಾಗೂ ಗುಣಪಾಲ ಕಡಂಬ ಗೌರವ ಸಲಹೆಗಾರರಾಗಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಂಬಳವನ್ನು ಶಿಸ್ತುಬದ್ಧವಾಗಿ ಸಂಘಟಿಸಲು ಈ ಅಸೋಸಿಯೇಷನ್ ಕ್ರಮ ವಹಿಸುತ್ತದೆ. ಕಂಬಳ ಕ್ರೀಡೆಯ ವೇಳಾಪಟ್ಟಿಯನ್ನು ತಯಾರಿಸುತ್ತದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…