Featured

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೂ ಒಂದೇ ಪೌರತ್ವವನ್ನು (ಏಕ ಪೌರತ್ವ) ಕಲ್ಪಿಸಿದೆ. ಆದರೆ ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಹೊರಟಿರುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ 14ನೇ ವಿಧಿಯ ನೇರ ಉಲ್ಲಂಘನೆಯಾಗಿದೆ ಎಂದು ಅಮಿತ್ ಶಾಗೆ ಬರೆದಿರುವ ಪತ್ರದಲ್ಲಿ ಶೋಭಾ ಕರಂದ್ಲಾಜೆ ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಕೇವಲ ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಮತ್ತು ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಈ ಪ್ರಮಾಣಪತ್ರವನ್ನು ನೀಡಲು ಉದ್ದೇಶಿಸಲಾಗಿದೆ. ಇದರಲ್ಲಿ ಭಾರತೀಯ ಪೌರತ್ವವನ್ನು ಕೇಂದ್ರ ಏಜೆನ್ಸಿಗಳ ಮೂಲಕ ಕಡ್ಡಾಯವಾಗಿ ಪರಿಶೀಲಿಸುವ ಯಾವುದೇ ದೃಢವಾದ ವ್ಯವಸ್ಥೆ ಇಲ್ಲ.

ಇದರಿಂದಾಗಿ ದೇಶದೊಳಗೆ ಅಕ್ರಮವಾಗಿ ನುಸುಳಿರುವ ವಿದೇಶಿ ಪ್ರಜೆಗಳು ಅಥವಾ ಅಕ್ರಮ ವಲಸಿಗರು ಸುಲಭವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ‘ಶಾಶ್ವತ ವಸತಿ ಪ್ರಮಾಣಪತ್ರ’ ಪಡೆಯುವ ಅಪಾಯವಿದೆ. ಒಮ್ಮೆ ಈ ಪ್ರಮಾಣಪತ್ರ ಕೈಸೇರಿದರೆ, ಅದನ್ನು ಬಳಸಿ ಅವರು ಸರ್ಕಾರದ ಸವಲತ್ತುಗಳು, ಶೈಕ್ಷಣಿಕ ಪ್ರವೇಶಾತಿ ಹಾಗೂ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲಿದ್ದಾರೆ. ಇದು ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ಹಿನ್ನಡೆ ಉಂಟುಮಾಡುತ್ತದೆ ಎಂದು ಶೋಭಾ ಕರಂದ್ಲಾಜೆ ಕಳವಳ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಈ ಅಧಿಸೂಚನೆ ಅತ್ಯಂತ ಆತಂಕಕಾರಿಯಾಗಿದೆ. ಇದರಲ್ಲಿ ಸೂಚಿಸಲಾದ ಅರ್ಹತಾ ಮಾನದಂಡಗಳು ಪ್ರಮುಖವಾಗಿ ಕಂದಾಯ ಅಧಿಕಾರಿಗಳ ಸ್ಥಳೀಯ ಪರಿಶೀಲನೆ ಮತ್ತು ನಿವಾಸದ ಆಧಾರದ ಮೇಲಿರುವಂತೆ ಕಂಡುಬರುತ್ತವೆ.

ಆದಾಗ್ಯೂ, ಸಮರ್ಥ ಕೇಂದ್ರ ಅಧಿಕಾರಾವಳಿಗಳ ಮೂಲಕ ಭಾರತೀಯ ಪೌರತ್ವದ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಯಾವುದೇ ನಿಬಂಧನೆ ಅಥವಾ ಅಕ್ರಮ ವಲಸಿಗರು ಮತ್ತು ವಿದೇಶಿ ಪ್ರಜೆಗಳನ್ನು ಹೊರಗಿಡಲು ಯಾವುದೇ ಬಲವಾದ ಕಾರ್ಯವಿಧಾನ ಇರುವುದಿಲ್ಲ.

ಇದರ ಪರಿಣಾಮವಾಗಿ, ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಅಥವಾ ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ವ್ಯಕ್ತಿಗಳು, ಸ್ಥಳೀಯ ದಾಖಲೆಗಳನ್ನು ಪ್ರಸ್ತುತಪಡಿಸುವ ಮೂಲಕ ಅಥವಾ ವಂಚನೆಯ ಮಾರ್ಗಗಳ ಮೂಲಕ ಖಾಯಂ ನಿವಾಸಿ ಪ್ರಮಾಣಪತ್ರವನ್ನು ಪಡೆಯಬಹುದು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago