ಕರ್ನಾಟಕ ಸಂಘ ಶಾರ್ಜ (KSS) ಕಳೆದ ಸುಮಾರು 20 ವರ್ಷಗಳಿಂದ ಸಂಯುಕ್ತ ಅರಬ್ ಅಮೀರ ಶಾಹಿ (UAE) ಯಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಏಳಿಗೆ ಮತ್ತು ಇತರ ಮಾನವೀಯ ನೆಲೆಯಲ್ಲಿ ಅನಿವಾಸಿ ಕನ್ನಡಿಗರ ಸೇವೆ ಮಾಡುತ್ತಿರುವ, ರಕ್ತ ದಾನ, ಅರೋಗ್ಯ ಶಿಬಿರ, ಸಾಂಸ್ಕೃತಿಕ ಕೂಟ ಮೊದಲಾದ ಜನ ಹಿತ ಸೇವಾ ಕಾರ್ಯಗಳ ಮೂಲಕ ಸದಾ ಕನ್ನಡಿಗರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜನಪ್ರಿಯ ಸೇವಾ ಸಂಸ್ಥೆ.
ಕೋವಿಡ್19 ಸಂಕ್ರಮಣದ ಪರಿಹಾರ ಕಾರ್ಯದಲ್ಲಿ ಯಾವುದೇ ಪ್ರಚಾರ ವಿಲ್ಲದೆ ಮೌನವಾಗಿ ತನ್ನನ್ನು ಸಕ್ರಿಯವಾಗಿ ಸಂಸ್ಥೆಯು ತೊಡಗಿಸಿಕೊಂಡಿದೆ. ಇದರ ಒಂದು ಭಾಗವಾಗಿ ಪ್ರಸ್ತುತ ಕರ್ನಾಟಕದ ಕೋವಿಡ್ 19 ಸಂತ್ರಸ್ತರ ನೆರವಿಗಾಗಿ ಸಂಸ್ಥೆಯ ವತಿಯಿಂದ ರೂಪಾಯಿ ಒಂದು ಲಕ್ಷವನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರಿಗೆ ಇತ್ತೀಚಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕ ಸಂಘದ ಪರವಾಗಿ ಸಂಸ್ಥೆಯ ಪೂರ್ವ ಅಧ್ಯಕ್ಷರೂ ಹಾಲಿ ಸಲಹೆಗಾರರೂ ಆದ ಶ್ರೀ ಸುಗಂಧ ರಾಜ್ ಬೇಕಲ್ ಮತ್ತು ಊರಲ್ಲಿರುವ ಸಂಸ್ಥೆಯ ಇತರ ಹಿತೈಷಿಗಳನ್ನೊಳಗೊಂಡ ನಿಯೋಗವು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಮೊತ್ತವನ್ನು ಹಸ್ತಾಂತರಿಸಿತು.
ಮಾನ್ಯ ಜಿಲ್ಲಾಧಿಕಾರಿಯವರು ಕರ್ನಾಟಕ ಸಂಘದ ಧೀರ್ಘಕಾಲದ ಜನಹಿತ ಸೇವಾ ಕಾರ್ಯವನ್ನು ಶ್ಲಾಘಿಸುತ್ತಾ ಕೋವಿಡ್19 ಸಂತ್ರಸ್ತರ ನೆರವಿಗೆ ಸಂಸ್ಥೆಯು ಅರ್ಪಿಸಿದ ದೇಣಿಗೆಯನ್ನು ಸ್ವೀಕರಿಸುತ್ತಾ ಕರ್ನಾಟಕ ಸರಕಾರದ ಪರವಾಗಿ ಧನ್ಯವಾದವನ್ನು ಹೇಳಿದರು ಹಾಗೂ ಸಾದರ ಸ್ವೀಕಾರದೊಂದಿಗೆ ಸರಕಾರದ ಪರವಾಗಿ ಪ್ರಶಂಷಾ ಪತ್ರವನ್ನು ನೀಡಿದರು.
ಕರ್ನಾಟಕ ಸಂಘ ಶಾರ್ಜಾದ ಪರವಾಗಿ ಜಿಲ್ಲಾಧಿಕಾರಿಯವರಿಗೆ ಧನ್ಯವಾದ ಸಮರ್ಪಿಸಿದ ಶ್ರೀ ಸುಗಂಧ ರಾಜ ಬೇಕಲ್ ರವರು, ಕನ್ನಡ ನಾಡಿನ ಜನತೆಯ ಸೇವೆಯನ್ನೇ ತನ್ನ ಮುಖ್ಯ ಗುರಿಯಾಗರಿಸಿ ಪ್ರವರ್ತಿಸುತ್ತಿಸುತ್ತಾ ಕಳೆದ 20 ವರ್ಷಗಳಿಂದ ಸಾರ್ಥಕವಾದ ಬಹುಮುಖೀ ಜನಪರ ಸೇವೆಯನ್ನು ಗೈಯ್ಯುತ್ತಿರುವ ಕರ್ನಾಟಕ ಸಂಘ ಶಾರ್ಜಾ ಇನ್ನು ಮುಂದೆಯೂ ಕನ್ನಡ ನಾಡಿನ ಒಳಿತಿಗಾಗಿ ತನ್ನ ತನ್ನ ಸೇವಾ ಕೈಂಕರ್ಯವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…