ಕರ್ನಾಟಕ ಸಂಘ ಶಾರ್ಜ (KSS) ಕಳೆದ ಸುಮಾರು 20 ವರ್ಷಗಳಿಂದ ಸಂಯುಕ್ತ ಅರಬ್ ಅಮೀರ ಶಾಹಿ (UAE) ಯಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಏಳಿಗೆ ಮತ್ತು ಇತರ ಮಾನವೀಯ ನೆಲೆಯಲ್ಲಿ ಅನಿವಾಸಿ ಕನ್ನಡಿಗರ ಸೇವೆ ಮಾಡುತ್ತಿರುವ, ರಕ್ತ ದಾನ, ಅರೋಗ್ಯ ಶಿಬಿರ, ಸಾಂಸ್ಕೃತಿಕ ಕೂಟ ಮೊದಲಾದ ಜನ ಹಿತ ಸೇವಾ ಕಾರ್ಯಗಳ ಮೂಲಕ ಸದಾ ಕನ್ನಡಿಗರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜನಪ್ರಿಯ ಸೇವಾ ಸಂಸ್ಥೆ.
ಕೋವಿಡ್19 ಸಂಕ್ರಮಣದ ಪರಿಹಾರ ಕಾರ್ಯದಲ್ಲಿ ಯಾವುದೇ ಪ್ರಚಾರ ವಿಲ್ಲದೆ ಮೌನವಾಗಿ ತನ್ನನ್ನು ಸಕ್ರಿಯವಾಗಿ ಸಂಸ್ಥೆಯು ತೊಡಗಿಸಿಕೊಂಡಿದೆ. ಇದರ ಒಂದು ಭಾಗವಾಗಿ ಪ್ರಸ್ತುತ ಕರ್ನಾಟಕದ ಕೋವಿಡ್ 19 ಸಂತ್ರಸ್ತರ ನೆರವಿಗಾಗಿ ಸಂಸ್ಥೆಯ ವತಿಯಿಂದ ರೂಪಾಯಿ ಒಂದು ಲಕ್ಷವನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರಿಗೆ ಇತ್ತೀಚಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕ ಸಂಘದ ಪರವಾಗಿ ಸಂಸ್ಥೆಯ ಪೂರ್ವ ಅಧ್ಯಕ್ಷರೂ ಹಾಲಿ ಸಲಹೆಗಾರರೂ ಆದ ಶ್ರೀ ಸುಗಂಧ ರಾಜ್ ಬೇಕಲ್ ಮತ್ತು ಊರಲ್ಲಿರುವ ಸಂಸ್ಥೆಯ ಇತರ ಹಿತೈಷಿಗಳನ್ನೊಳಗೊಂಡ ನಿಯೋಗವು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಮೊತ್ತವನ್ನು ಹಸ್ತಾಂತರಿಸಿತು.
ಮಾನ್ಯ ಜಿಲ್ಲಾಧಿಕಾರಿಯವರು ಕರ್ನಾಟಕ ಸಂಘದ ಧೀರ್ಘಕಾಲದ ಜನಹಿತ ಸೇವಾ ಕಾರ್ಯವನ್ನು ಶ್ಲಾಘಿಸುತ್ತಾ ಕೋವಿಡ್19 ಸಂತ್ರಸ್ತರ ನೆರವಿಗೆ ಸಂಸ್ಥೆಯು ಅರ್ಪಿಸಿದ ದೇಣಿಗೆಯನ್ನು ಸ್ವೀಕರಿಸುತ್ತಾ ಕರ್ನಾಟಕ ಸರಕಾರದ ಪರವಾಗಿ ಧನ್ಯವಾದವನ್ನು ಹೇಳಿದರು ಹಾಗೂ ಸಾದರ ಸ್ವೀಕಾರದೊಂದಿಗೆ ಸರಕಾರದ ಪರವಾಗಿ ಪ್ರಶಂಷಾ ಪತ್ರವನ್ನು ನೀಡಿದರು.
ಕರ್ನಾಟಕ ಸಂಘ ಶಾರ್ಜಾದ ಪರವಾಗಿ ಜಿಲ್ಲಾಧಿಕಾರಿಯವರಿಗೆ ಧನ್ಯವಾದ ಸಮರ್ಪಿಸಿದ ಶ್ರೀ ಸುಗಂಧ ರಾಜ ಬೇಕಲ್ ರವರು, ಕನ್ನಡ ನಾಡಿನ ಜನತೆಯ ಸೇವೆಯನ್ನೇ ತನ್ನ ಮುಖ್ಯ ಗುರಿಯಾಗರಿಸಿ ಪ್ರವರ್ತಿಸುತ್ತಿಸುತ್ತಾ ಕಳೆದ 20 ವರ್ಷಗಳಿಂದ ಸಾರ್ಥಕವಾದ ಬಹುಮುಖೀ ಜನಪರ ಸೇವೆಯನ್ನು ಗೈಯ್ಯುತ್ತಿರುವ ಕರ್ನಾಟಕ ಸಂಘ ಶಾರ್ಜಾ ಇನ್ನು ಮುಂದೆಯೂ ಕನ್ನಡ ನಾಡಿನ ಒಳಿತಿಗಾಗಿ ತನ್ನ ತನ್ನ ಸೇವಾ ಕೈಂಕರ್ಯವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…