Featured

ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ – Vishwanews24

ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದೆ.

ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago