ಬೆಂಗಳೂರು : ರಾಜ್ಯ ಸರ್ಕಾರವು ಗುತ್ತಿಗೆ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿ ಸಲಾಗಿದ್ದು, ಒಟ್ಟು 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಬಿಎಂಪಿಯ ವೆಬ್ ಸೈಟ್ https://bbmp.gov.in ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ನೋಡಬಹುದು. ಜ.16ರಿ೦ದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜನವರಿ 30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಲಾಗಿದೆ.
ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ 3,673 ಹುದ್ದೆಗಳ ಪೈಕಿ 3,243 ಹುದ್ದೆಗಳನ್ನು ಸಾಮಾನ್ಯ ಹುದ್ದೆಗಳಾಗಿದ್ದು, ಉಳಿದ 430 ಗಳಿಗೆ ನೇಮಕಾತಿಗೆ ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿ ಮೀಸಲಿಡಲಾಗಿದೆ.
ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಪೌರಕಾರ್ಮಿಕರಿಗೆ 217 ಸಾವಿರದಿಂದ 228,950 ರವರೆಗೆ ವೇತನ ನಿಗದಿ ಪಡಿಸಲಾಗಿದೆ. ನೇಮಕಾತಿ ವಯೋಮಿತಿಯನ್ನು ಗುಷ್ಠ 35 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ವಯಸ್ಸು ದೃಢಿಕರಣಕ್ಕೆ ಅರ್ಜಿ ಸಲ್ಲಿಸುವ ವೇಳೆ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಮತದಾರ ಗುರುತಿನ ಚೀಟಿ ಹಾಗೂ ಪಡಿತರ ಚೀಟಿಯ ದಾಖಲೆಗಳಲ್ಲಿ ಯಾವುದಾದರೂ ದಾಖಲೆ ಸಲ್ಲಿಸಬೇಕಿದೆ. ಕನಿಷ್ಠ 2 ವರ್ಷ ಗುತ್ತಿಗೆ ಆಧಾರದಡಿ ಕಾರ್ಯನಿರ್ವ ಹಿಸಿದ ಪೌರಕಾರ್ಮಿಕರು ಕಾಯಂಗೊಳಿಸುವ ನೇಮಕಾತಿ ವೇಳೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…