Featured

ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಹಾಲ್, ರೆಸಾರ್ಟ್ ಆರಂಭಕ್ಕೆ  ಷರತ್ತುಬದ್ಧ ಅನುಮತಿ -Vishwanews24

ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಹಾಲ್, ರೆಸಾರ್ಟ್ ಆರಂಭಕ್ಕೆ  ಷರತ್ತುಬದ್ಧ ಅನುಮತಿ -Vishwanews24

ಬೆಂಗಳೂರು: ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಮತ್ತು ರೆಸಾರ್ಟ್ ಆರಂಭಕ್ಕೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಇಂದು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಚಿವರೊಂದಿಗೆ ಸಭೆ ನಡೆಸಲಾಯ್ತು. ಸಭೆಯ ಆರಂಭದಲ್ಲಿ ಕೋವಿಡ್ ನಿಯಮಗಳನ್ನು ಸಡಿಲಗೊಳಿಸುವ ಕುರಿತ ಪ್ರಸ್ತಾಪವನ್ನು ಇರಿಸಲಾಯ್ತು.

ಕಲ್ಯಾಣ ಮಂಟಪ ಹೋಟೆಲ್ ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನ ಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಮಂಟಪಗಳು, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಿಗೆ ಷರತ್ತುಬದ್ಧ ಅನುಮತಿ ನೀಡಿದ್ದು, 40 ಜನರಿಗೆ ಸೀಮಿತವಾಗಿ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ. ಮದುವೆ, ಪಾರ್ಟಿ ಹಾಲ್ ಗೆ ಹೋಗೋರು ವೈಯಕ್ತಿಕ ಪಾಸ್ ತಗೋಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೋವಿಡ್ 19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಮುಖ್ಯಮಂತ್ರಿಗಳು ಸೂಚಿಸಿದರು. ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿದೆ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಯಿತು. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಸಿಎಂ ಸೂಚಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago