Featured

ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಹಾಲ್, ರೆಸಾರ್ಟ್ ಆರಂಭಕ್ಕೆ  ಷರತ್ತುಬದ್ಧ ಅನುಮತಿ -Vishwanews24

ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಹಾಲ್, ರೆಸಾರ್ಟ್ ಆರಂಭಕ್ಕೆ  ಷರತ್ತುಬದ್ಧ ಅನುಮತಿ -Vishwanews24

ಬೆಂಗಳೂರು: ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಮತ್ತು ರೆಸಾರ್ಟ್ ಆರಂಭಕ್ಕೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಇಂದು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಚಿವರೊಂದಿಗೆ ಸಭೆ ನಡೆಸಲಾಯ್ತು. ಸಭೆಯ ಆರಂಭದಲ್ಲಿ ಕೋವಿಡ್ ನಿಯಮಗಳನ್ನು ಸಡಿಲಗೊಳಿಸುವ ಕುರಿತ ಪ್ರಸ್ತಾಪವನ್ನು ಇರಿಸಲಾಯ್ತು.

ಕಲ್ಯಾಣ ಮಂಟಪ ಹೋಟೆಲ್ ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನ ಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಮಂಟಪಗಳು, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಿಗೆ ಷರತ್ತುಬದ್ಧ ಅನುಮತಿ ನೀಡಿದ್ದು, 40 ಜನರಿಗೆ ಸೀಮಿತವಾಗಿ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ. ಮದುವೆ, ಪಾರ್ಟಿ ಹಾಲ್ ಗೆ ಹೋಗೋರು ವೈಯಕ್ತಿಕ ಪಾಸ್ ತಗೋಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೋವಿಡ್ 19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಮುಖ್ಯಮಂತ್ರಿಗಳು ಸೂಚಿಸಿದರು. ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿದೆ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಯಿತು. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಸಿಎಂ ಸೂಚಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago