Featured

ಕಲ್ಯಾಣ ‌ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿಗೆ ₹3,000 ಕೋಟಿ: ಬೊಮ್ಮಾಯಿ ಘೋಷಣೆ -Vishawanews24

ಕಲ್ಯಾಣ ‌ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿಗೆ ₹3,000 ಕೋಟಿ: ಬೊಮ್ಮಾಯಿ ಘೋಷಣೆ -Vishawanews24

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ‌ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ನೀಡಲಾಗುತ್ತಿರುವ ₹1500 ಕೋಟಿ ಅನುದಾನದ ಜತೆಗೆ ಹೆಚ್ಚುವರಿ ₹1500 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಘೋಷಿಸಿದರು.

ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ‌ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ ₹8 ಸಾವಿರ ‌ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದೇವೆ. ಆ ಪೈಕಿ ₹6 ಸಾವಿರ ಕೋಟಿ ಖರ್ಚಾಗಿದೆ. ಉಳಿದ ₹2 ಸಾವಿರ ಕೋಟಿಯನ್ನು ಬರುವ ಮಾರ್ಚ್‌ನೊಳಗೆ ಖರ್ಚು ಮಾಡಬೇಕು. ಅಂದಾಗ ಮಾತ್ರ ಹೆಚ್ಚುವರಿ ₹1500 ಕೋಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಷರತ್ತು ವಿಧಿಸಿದರು.

371 (ಜೆ) ಕಲಂನಡಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಹೊತ್ತಿರುವ ಕೋಶವನ್ನು ‌ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು.

‘ನಾನು ಯಾವುದೇ ಹೊಸ ಘೋಷಣೆಗಳನ್ನು ‌ಹೊರಡಿಸುವುದಿಲ್ಲ.‌ ಈಗಾಗಲೇ ಇರುವ ಯೋಜನೆಗಳನ್ನು ‌ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು‌ ಗಮನ ಹರಿಸುತ್ತೇನೆ’ ಎಂದರು.

ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ವರದಿ ‌ಅನ್ವಯ ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಕಲ್ಯಾಣ ‌ಕರ್ನಾಟಕ‌ ಪ್ರದೇಶ ಅಭಿವೃದ್ಧಿ ‌ಮಂಡಳಿ ಹಾಗೂ ‌ನಂಜುಂಡಪ್ಪ ವರದಿ ಅನ್ವಯ ನಡೆಯಲಿರುವ ಕಾಮಗಾರಿಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಖುದ್ದು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಕೆಕೆಆರ್‌ಡಿಬಿಗೆ ₹3 ಸಾವಿರ ಕೊಟ್ಟಿದ್ದೇನೆ ಎಂದು ಸರ್ಕಾರದಿಂದ ಈ ಭಾಗಕ್ಕೆ ನೀಡಲಿರುವ ಇತರೆ ಇಲಾಖೆಗಳ ಅನುದಾನಕ್ಕೆ ಕತ್ತರಿ ಹಾಕುವುದಿಲ್ಲ. ಉಳಿದ ಜಿಲ್ಲೆಗಳಿಗೆ ಎಷ್ಟು ಸಿಗುತ್ತದೋ ಅಷ್ಟೂ ಅನುದಾನ ಈ ಜಿಲ್ಲೆಗಳಿಗೆ ಸಿಗಲಿದೆ ಎಂದು ಅವರು ಭರವಸೆ ನೀಡಿದರು.

Vishwa News 24

Recent Posts

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

10 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

29 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago