ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ನೀಡಲಾಗುತ್ತಿರುವ ₹1500 ಕೋಟಿ ಅನುದಾನದ ಜತೆಗೆ ಹೆಚ್ಚುವರಿ ₹1500 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ ₹8 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದೇವೆ. ಆ ಪೈಕಿ ₹6 ಸಾವಿರ ಕೋಟಿ ಖರ್ಚಾಗಿದೆ. ಉಳಿದ ₹2 ಸಾವಿರ ಕೋಟಿಯನ್ನು ಬರುವ ಮಾರ್ಚ್ನೊಳಗೆ ಖರ್ಚು ಮಾಡಬೇಕು. ಅಂದಾಗ ಮಾತ್ರ ಹೆಚ್ಚುವರಿ ₹1500 ಕೋಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಷರತ್ತು ವಿಧಿಸಿದರು.
371 (ಜೆ) ಕಲಂನಡಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಹೊತ್ತಿರುವ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು.
‘ನಾನು ಯಾವುದೇ ಹೊಸ ಘೋಷಣೆಗಳನ್ನು ಹೊರಡಿಸುವುದಿಲ್ಲ. ಈಗಾಗಲೇ ಇರುವ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಗಮನ ಹರಿಸುತ್ತೇನೆ’ ಎಂದರು.
ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ವರದಿ ಅನ್ವಯ ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ನಂಜುಂಡಪ್ಪ ವರದಿ ಅನ್ವಯ ನಡೆಯಲಿರುವ ಕಾಮಗಾರಿಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಖುದ್ದು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಕೆಕೆಆರ್ಡಿಬಿಗೆ ₹3 ಸಾವಿರ ಕೊಟ್ಟಿದ್ದೇನೆ ಎಂದು ಸರ್ಕಾರದಿಂದ ಈ ಭಾಗಕ್ಕೆ ನೀಡಲಿರುವ ಇತರೆ ಇಲಾಖೆಗಳ ಅನುದಾನಕ್ಕೆ ಕತ್ತರಿ ಹಾಕುವುದಿಲ್ಲ. ಉಳಿದ ಜಿಲ್ಲೆಗಳಿಗೆ ಎಷ್ಟು ಸಿಗುತ್ತದೋ ಅಷ್ಟೂ ಅನುದಾನ ಈ ಜಿಲ್ಲೆಗಳಿಗೆ ಸಿಗಲಿದೆ ಎಂದು ಅವರು ಭರವಸೆ ನೀಡಿದರು.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…