ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ನೀಡಲಾಗುತ್ತಿರುವ ₹1500 ಕೋಟಿ ಅನುದಾನದ ಜತೆಗೆ ಹೆಚ್ಚುವರಿ ₹1500 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ ₹8 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದೇವೆ. ಆ ಪೈಕಿ ₹6 ಸಾವಿರ ಕೋಟಿ ಖರ್ಚಾಗಿದೆ. ಉಳಿದ ₹2 ಸಾವಿರ ಕೋಟಿಯನ್ನು ಬರುವ ಮಾರ್ಚ್ನೊಳಗೆ ಖರ್ಚು ಮಾಡಬೇಕು. ಅಂದಾಗ ಮಾತ್ರ ಹೆಚ್ಚುವರಿ ₹1500 ಕೋಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಷರತ್ತು ವಿಧಿಸಿದರು.
371 (ಜೆ) ಕಲಂನಡಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಹೊತ್ತಿರುವ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು.
‘ನಾನು ಯಾವುದೇ ಹೊಸ ಘೋಷಣೆಗಳನ್ನು ಹೊರಡಿಸುವುದಿಲ್ಲ. ಈಗಾಗಲೇ ಇರುವ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಗಮನ ಹರಿಸುತ್ತೇನೆ’ ಎಂದರು.
ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ವರದಿ ಅನ್ವಯ ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ನಂಜುಂಡಪ್ಪ ವರದಿ ಅನ್ವಯ ನಡೆಯಲಿರುವ ಕಾಮಗಾರಿಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಖುದ್ದು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಕೆಕೆಆರ್ಡಿಬಿಗೆ ₹3 ಸಾವಿರ ಕೊಟ್ಟಿದ್ದೇನೆ ಎಂದು ಸರ್ಕಾರದಿಂದ ಈ ಭಾಗಕ್ಕೆ ನೀಡಲಿರುವ ಇತರೆ ಇಲಾಖೆಗಳ ಅನುದಾನಕ್ಕೆ ಕತ್ತರಿ ಹಾಕುವುದಿಲ್ಲ. ಉಳಿದ ಜಿಲ್ಲೆಗಳಿಗೆ ಎಷ್ಟು ಸಿಗುತ್ತದೋ ಅಷ್ಟೂ ಅನುದಾನ ಈ ಜಿಲ್ಲೆಗಳಿಗೆ ಸಿಗಲಿದೆ ಎಂದು ಅವರು ಭರವಸೆ ನೀಡಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]