ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.ಭಾನುವಾರ ಬೆಳಿಗ್ಗೆ ಬಾವನ ಜೊತೆ ಬೆಳಿಗ್ಗೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಸುಮಾರು 1.30 ಗಂಟೆಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಕಳುಹಿಸಿ, ಕಾರಿನ ಸೀಟಿನಲ್ಲಿಯೇ ಮಲಗಿದ್ದರು.
ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.
ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಕಾರಿನ ಕಿಟಕಿ ,ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪ್ಪಿರುವುದೇ? ಅಥವಾ ಇನ್ನಾವುದೇ ಕಾಯಿಲೆಯಿಂದ ಮೃತಪಟ್ಟಿದ್ದಾನಾ? ಎಂಬುದು ವೈದ್ಯಕೀಯ ರಿಪೋರ್ಟ್ ಹಾಗೂ ಪೊಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…