ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ – Vishwanews24
ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ
ಕಲ್ಲಡ್ಕ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ ಎಂದು ತಿಳಿದು ಬಂದಿದೆ.
ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಪರೀಕ್ಷೆ ಹಿನ್ನಲೆ ಮನೆಯಲ್ಲಿದ್ದಳು ಎಂದು ಹೇಳಲಾಗಿದ್ದು, ತಾಯಿ ಮಗಳ ಓದುತ್ತಿದ್ದಾಳಾ ಎಂದು ನೆರೆಮನೆಯವರ ಹತ್ತಿರ ವಿಚಾರಿಸಿದ್ದರು, ಈ ವೇಳೆ ಪಕ್ಕದ ಮನೆಯವರು ಬಂದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ : ವಿಷಕಾರಿ ಸೊಪ್ಪು ತಿಂದು ಒಂದು ದನ ಸಾವು , ನಾಲ್ಕು ಗಂಭೀರ- Vishwanews24
