Featured

ಕಲ್ಲಡ್ಕ ಶಾಲೆಗೆ ಅಕ್ಕಿ ಬರುವುದನ್ನು ನಾನು ನಿಲ್ಲಿಸಿಲ್ಲ, ಅದಕ್ಕೆ ಬರುವ ಹಣವನ್ನು ನಿಲ್ಲಿಸಿದ್ದೇನೆ ;ದೇವರ ದುಡ್ಡು ದುರುಪಯೋಗ ಆಗಬಾರದು ಎಂಬುದು ನನ್ನ ಯೋಚನೆ : ರಮಾನಾಥ ರೈ -Vishwanews24

ಬಂಟ್ವಾಳ:  ಮಿಥುನ್ ರೈ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಿಯಲ್ಲೊಬ್ಬ ಕೇರಳದಲ್ಲಿ ನಡೆದ ಕೊಲೆ ಪ್ರಕರಣದ ಪ್ರಧಾನ ಆರೋಪಿಯಾಗಿದ್ದು, ಪೊಲೀಸರು ಯಾವುದೇ ಒತ್ತಡಗಳಿಗೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಬೆಳಗ್ಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳ ಯಾವುದೇ ಒತ್ತಡಕ್ಕೆ ಮಣಿಯದೆ ಪೊಲೀಸರು ನಿಷ್ಪಕ್ಷಪಾತವಾಗಿ ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು. ಇದುವರೆಗೆ ಈ ಪ್ರಕರಣದಲ್ಲಿ ಪೊಲೀಸರು ಕೈಗೊಂಡಿರುವ ಕ್ರಮವನ್ನು ಅಭಿನಂದಿಸುತ್ತೇನೆ ಎಂದರು.

ಹಿಂದೆ ನಡೆದ ಗಲಭೆಗಳ ಪ್ರಮುಖ ಆರೋಪಿಗಳು ಯಾರು, ಜಲೀಲ್ ಕರೋಪಾಡಿ, ಶರತ್ ಮಡಿವಾಳ, ಅಶ್ರಫ್, ಹರೀಶ್ ಪೂಜಾರಿ ಹತ್ಯೆಗಳ ಆರೋಪಿಗಳು ಯಾರು, ಕಲ್ಲು ತೂರಾಟ ಮಾಡಿದವರು ಯಾರು ಎಂದು ಪ್ರಶ್ನಿಸಿದ ಅವರು, ಈ ಪ್ರಕರಣದಲ್ಲಿ ಯಾವುದೇ ಕಾಂಗ್ರೆಸ್ ಕಾರ್ಯಕರ್ತನಿಲ್ಲ. ಬದಲಾಗಿ ಮತೀಯವಾದಿ ಸಂಘಟನೆಗಳು ಹಾಗು ಇವನ್ನು ಪೋಷಿಸುವ ರಾಷ್ಟ್ರೀಯ ಪಕ್ಷಗಳು ಕಾರಣ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನನ್ನ ಬಗ್ಗೆ ಅಪಪ್ರಚಾರಗಳು ನಡದಿವೆ. ಕಲ್ಲಡ್ಕ ಶಾಲೆಗೆ ಅಕ್ಕಿ ಬರುವುದನ್ನು ನಾನು ನಿಲ್ಲಿಸಿಲ್ಲ, ಅದಕ್ಕೆ ಬರುವ ಹಣವನ್ನು ನಿಲ್ಲಿಸಿದ್ದೇನೆ, ದೇವರ ದುಡ್ಡು ದುರುಪಯೋಗ ಆಗಬಾರದು ಎಂಬುದೇ ನನ್ನ ಯೋಚನೆಯಾಗಿತ್ತು. ಆದರೆ ಅಪಪ್ರಚಾರ ಮಾಡಲಾಯಿತು ಎಂದ ರೈ, ಕಳೆದ ಒಂದು ವರ್ಷದಲ್ಲಿ ಶಾಂತಿ ನೆಲೆಸಿದೆ ಎಂದು ಬಿಜೆಪಿಯವರು ಸಂದೇಶಗಳನ್ನು ಹರಡುತ್ತಿದ್ದಾರೆ, ಶಾಂತಿ ನೆಲೆಸಿರುವುದು ಸ್ವಾಗತಾರ್ಹ ಆದರೆ ಈ ಹಿಂದಿನ ವರ್ಷಗಳಲ್ಲಿಯೂ ಶಾಂತಿ ಕದಡಿದವರು ನಾವಲ್ಲ , ಬಿಜೆಪಿಯವರೇ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

15 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

15 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

15 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

15 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

15 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

16 hours ago